ತುಮಕೂರು | ಹಿಂದಿ ಎಂಬ ಘಟಸರ್ಪ ಕನ್ನಡವನ್ನು ನುಂಗಲು ಬಿಡಬಾರದು : ಅಗ್ರಹಾರ ಕೃಷ್ಣಮೂರ್ತಿ

Date:

Advertisements

ಸ್ವಘೋಷಿತ ರಾಷ್ಟ್ರೀಯ ಭಾಷೆ ಎಂದು ಹೇಳಲಾಗುವ ಹಿಂದಿ ಎಂಬ ಘಟಸರ್ಪವು ಕನ್ನಡವನ್ನು ನುಂಗಲು ಬಿಡಬಾರದು ಎಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಅಗ್ರಹಾರ ಕೃಷ್ಣಮೂರ್ತಿ ಕರೆ ಕೊಟ್ಟರು.

ತುಮಕೂರು ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತದಲ್ಲಿ 11 ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ಪಡೆದರೂ ಸಹ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಬಿಂಬಿಸಲಾಗುತ್ತಿದೆ. ಎಲ್ಲರಿಗೂ ಅವರವರ ಮಾತೃಭಾಷೆ ಮಹತ್ವವಾದುದು. ನಮ್ಮ ಭಾಷೆಯನ್ನು ನಾವು ಪ್ರೀತಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದು ತಿಳಿಸಿದರು.

1000714212

ಬಹು ಭಾಷಿಕ, ಬಹು ಸಂಸ್ಕೃತಿ, ಬಹು ಸಂಪ್ರದಾಯಗಳನ್ನು ಹೊಂದಿರುವ ದೇಶದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ಸಾವಿರಾರು ವರ್ಷಗಳ ಇತಿಹಾಸವಿದ್ದು, ನಾಡು-ನುಡಿಗಾಗಿ ಹೋರಾಡಿದ ಹೋರಾಟಗಾರರ ಶ್ರಮವನ್ನು ವ್ಯರ್ಥ ಮಾಡಬಾರದು ಎಂದು ತಿಳಿಸಿದರು.

Advertisements

ಅಭಿವ್ಯಕ್ತಿಗೆ ಧಕ್ಕೆ

ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಲೇಖಕರು, ಸಾಹಿತಿಗಳು, ಪತ್ರಕರ್ತರು ತಮ್ಮ ಅಭಿಪ್ರಾಯಗಳನ್ನು ಅಭಿವ್ಯಕ್ತಿಗೊಳಿಸಲೂ ಸಹ ತೊಡಕುಗಳು ಉಂಟಾಗುತ್ತಿವೆ ಎಂದು ಸಮ್ಮೇಳನಾಧ್ಯಕ್ಷರು ಬೇಸರ ವ್ಯಕ್ತಪಡಿಸಿದರು. ಕನ್ನಡ ಭಾಷೆಯಲ್ಲಿ ಇತರೆ ಭಾಷೆಗಳಿಗಿಂತ ಹೆಚ್ಚು ವೈಚಾರಿಕತೆ ಮತ್ತು ವೈಜ್ಞಾನಿಕತೆ ಬಗ್ಗೆ ಸಾಹಿತ್ಯಗಳು ರಚನೆಯಾಗಿರುವುದೇ ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದರು.

1000714201

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಮರಣ ಸಂಚಿಕೆ ಕಲ್ಪ ಸಂಪದ ಪುಸ್ತಕವನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪಾಲಿಕೆ ಆಯುಕ್ತೆ ಅಶ್ವಿಜ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಗೌರವ ಕಾರ್ಯದರ್ಶಿ ಡಾ. ಡಿ.ಎನ್.ಯೋಗೀಶ್ವರಪ್ಪ, ಡಾ. ಕಂಟಲಗೆರೆ ಸಣ್ಣಹೊನ್ನಯ್ಯ, ಮುರುಳಿಕೃಷ್ಣಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್, ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಚೇತನ್, ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಚಾಂದು, ರಾಜಶೇಖರ್, ಜಿಲ್ಲೆಯ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

1000714192

ಕಾರ್ಯಕ್ರಮಕ್ಕೂ ಮುನ್ನ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಪರಿಷತ್ತಿನ ದ್ವಜಾರೋಹಣವನ್ನು ನೆರವೇರಿಸಿದರು. ನಗರದ ಬಿಜಿಎಸ್ ವೃತ್ತದಿಂದ ಗಾಜಿನ ಮನೆಯವರೆಗೆ ಸಮ್ಮೇಳಾನಾಧ್ಯಕ್ಷರಾದ ಅಗ್ರಹಾರ ಕೃಷ್ಣಮೂರ್ತಿ ದಂಪತಿಗಳನ್ನು ವಿವಿಧ ಕಲಾ ತಂಡಗಳಿಂದ ಮೆರವಣಿಗೆಯ ಮೂಲಕ ಕರೆತರಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X