ವರ್ಷವಿಡೀ ಒತ್ತಡದ ಬದುಕಿನಲ್ಲಿ ಕೆಲಸ ಮಾಡುವ ಪೊಲೀಸರು ವರ್ಷಕ್ಕೊಂದು ಬಾರಿಯಾದರೂ ಕ್ರೀಡೆಗಳಲ್ಲಿ ತೊಡಗಿಸಿಕೊಂಡು ಸಹದ್ಯೋಗಿಗಳೊಂದಿಗೆ ಬಾಂಧವ್ಯ ಬಲಗೊಳಿಸಿಕೊಳ್ಳಬೇಕು ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ ಕೆ ಹೇಳಿದರು.
ಜಿಲ್ಲಾ ಪೊಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
“ಕ್ರೀಡೆಗಳು ದೈಹಿಕ ಮತ್ತು ಆರೋಗ್ಯಕ್ಕೆ ಸಹಕಾರಿಯಾಗಿವೆ. ಪೊಲೀಸರು ನಿತ್ಯದ ಕೆಲಸ ಕಾರ್ಯಗಳಲ್ಲಿ ದಿನ ಕಳೆದುಹೋಗುತ್ತದೆ. ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಗಳಲ್ಲಿ ತೊಡಗಸಿಕೊಳ್ಳುವುದು ಮನಸ್ಸು ಪ್ರಫುಲ್ಲವಾಗಲು ಸಹಕಾರಿಯಾಗುತ್ತದೆ” ಎಂದರು.
“ಕ್ರೀಡೆಗಳ ಹೆಸರಿನಲ್ಲಿ ಎಲ್ಲ ಸಹದ್ಯೋಗಿಗಳನ್ನು ಭೇಟಿ ಮಾಡಿ ಸೌಹಾದತೆ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಮುಂದಿನ ದಿನಗಳಲ್ಲಿ ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಜಂಟಿ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗುವುದು” ಎಂದು ಹೇಳಿದರು.
ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, “ಪ್ರತಿವರ್ಷವೂ ವಾರ್ಷಿಕ ಕ್ರೀಡಾಕೂಟಗಳನ್ನು ಪೊಲೀಸ್ ಇಲಾಖೆ ನಡೆಸಿಕೊಂಡು ಬರುತ್ತಿದೆ. ಪೊಲೀಸರೂ ಕೂಡಾ ಉತ್ತಮ ಕ್ರೀಡಾ ಪ್ರತಿಭೆ ಹೊಂದಿದ್ದಾರೆ. ವರ್ಷಕೊಮ್ಮೆ ಸ್ಪರ್ಧೆಗಳನ್ನು ನಡೆಸುವುದರಿಂದ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಸಹಕಾರಿಯಾಗುತ್ತದೆ” ಎಂದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಂವಿಧಾನ ನಮ್ಮ ಜೀವಾಳ: ಕುಮಾರ್ ಇಂಡಿಕರ್ ಐಎಎಸ್
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಡಾ. ಶಿವಕುಮಾರ, ಹರೀಶ, ಡಿವೈಎಸ್ಪಿ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳ ಪಿಐ, ಸಿಪಿಐ, ಪೊಲೀಸರು ಭಾಗವಹಿಸಿದ್ದರು. ಓಟ ಸ್ಪರ್ಧೆ ಸೇರಿದಂತೆ ವಿವಿಧ ಕ್ರೀಡೆಗಳು ನಡೆದವು.
