ವಿಜಯಪುರ | 19ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವದ ‘ಶಕ್ತಿ ಸಂಭ್ರಮ’

Date:

Advertisements

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿರುವ 19ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿಯರು ಅತ್ಯಂತ ಕ್ರಿಯಾಶೀಲರಾಗಿ ಛಾಯಾಚಿತ್ರ, ವರದಿಗಾರಿಕೆ, ವಿಡಿಯೊಗ್ರಫಿ ಮಾಡುವುದರ ಮೂಲಕ ವೃತ್ತಿಪರ ತರಬೇತಿ ಪಡೆದುಕೊಂಡರು.

ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳನ್ನು ಸೆರೆಹಿಡಿದು ವರದಿ ಮಾಡಿ, ಮಾಧ್ಯಮಕ್ಕೆ ಕಳುಹಿಸುವ ಮೂಲಕ ಅತ್ಯುತ್ತಮ ಕವರೇಜ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮಹಿಳಾ ಧ್ವನಿ ವಿಶೇಷ ಸಂಚಿಕೆ ಪ್ರಕಟಿಸಿದರು. ಅಕ್ಕ ಟಿವಿ ಮೂಲಕ ಮೂರೂ ದಿನಗಳ ಕಾರ್ಯಕ್ರಮದ ಲೈವ್ ಕವರೇಜ್ ಮಾಡುತ್ತಿದ್ದಾರೆ. ಸಾಮಾಜಿಕ ಪಾಲತಾಣದಲ್ಲಿ ಯುವಜನೋತ್ಸವ ‘ಶಕ್ತಿ ಸಂಭ್ರಮʼದ ಸುದ್ದಿಗಳನ್ನು ಕ್ಷಣಕ್ಷಣಕ್ಕೂ ಎಲ್ಲೆಡೆ ತಲುಪಿಸುವಂತೆ ಮಾಡಿದ ಕೀರ್ತಿ ವಿದ್ಯಾರ್ಥಿನಿಯರಿಗೆ ಸಲ್ಲುತ್ತದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕುವೆಂಪು ಓದು ಕಮ್ಮಟ, ಕಾಲೇಜು ವಿದ್ಯಾರ್ಥಿಗಳಿಗೆ ಸಹಕಾರಿ: ಡಾ ಚನ್ನಪ್ಪ ಕಟ್ಟಿ

Advertisements

ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂಶೋಧನಾ ವಿದ್ಯಾರ್ಥಿನಿಯರು, ಪತ್ರಿಕೋದ್ಯಮ ವಿದ್ಯಾರ್ಥಿನಿಯರಿಗೆ ವಿವಿಧ ರೀತಿಯ ಪ್ರಾಯೋಗಿಕ ತರಬೇತಿ ನೀಡಿದರು.

ತಾಂತ್ರಿಕ ಸಹಾಯಕ ನೀಲಕಂಠ ಹೆಗಡಿ ಮತ್ತು ಸಂಜಯ್ ರಾಠೋಡ ವಿದ್ಯಾರ್ಥಿನಿಯರಿಗೆ ತಾಂತ್ರಿಕ ನೆರವು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Download Eedina App Android / iOS

X