ಗುಬ್ಬಿ | ಕನ್ನಡ ಭಾಷೆ ಉದ್ಯೋಗ ಕಲ್ಪಿಸಿ ಅನ್ನದ ಭಾಷೆಯಾಗಬೇಕು : ನಲ್ಲೂರು ಗ್ರಾಪಂ ಅಧ್ಯಕ್ಷ ವತ್ಸಲಕುಮಾರ್

Date:

Advertisements

ಮನೆ ಮನೆಯಲ್ಲಿ ಕನ್ನಡ ಮಾತೃ ಭಾಷೆಯಾಗಿದೆ. ಈ ಜೊತೆಗೆ ಉದ್ಯೋಗ ಸೃಷ್ಟಿಸಿ ಅನ್ನದ ಭಾಷೆ ಎಂಡೆನಿಸಬೇಕು ಎಂದು ನಲ್ಲೂರು ಗ್ರಾಪಂ ಅಧ್ಯಕ್ಷ ವತ್ಸಲಕುಮಾರ್ ತಿಳಿಸಿದರು

ಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಮಾರನಹಳ್ಳಿ ಗ್ರಾಮದಲ್ಲಿ ಶ್ರೀ ಮುನೇಶ್ವರ ಸೇವಾ ಸಮಿತಿವತಿಯಿಂದ ಕಾರ್ತಿಕ ದೀಪೋತ್ಸವ ಅಂಗವಾಗಿ ಅದ್ದೂರಿಯಾಗಿ ಆಚರಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಶಾಸ್ತ್ರೀಯ ಸ್ಥಾನಮಾನ ಗಳಿಸಿದೆ ಎಂದರು.

ದಲಿತ ಸಂಘರ್ಷ ಸಮಿತಿ ಸಂಚಾಲಕ ಚೇಳೂರು ಶಿವನಂಜಪ್ಪ ಮಾತನಾಡಿ ಸುಂದರ ಸರಳ ಭಾಷೆಯಾಗಿ ಬೆಳೆದ ಕನ್ನಡ ಆಂಗ್ಲ ಮಾಧ್ಯಮ ಒಲವಿನಲ್ಲಿ ಇಕ್ಕಟ್ಟಿಗೆ ಸಿಲುಕಿದೆ. ಗ್ರಾಮೀಣ ಭಾಗದಲ್ಲಿ ಕನ್ನಡ ಶಾಲೆಗಳು ಮಾತ್ರ ಕನ್ನಡ ಉಳಿಸುವ ಕೆಲಸ ಮಾಡುತ್ತಿದೆ. ಕಾನ್ವೆಂಟ್ ವ್ಯಾಮೋಹದಿಂದ ಪೋಷಕರು ಕನ್ನಡ ತಾತ್ಸಾರ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

Advertisements

ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಲಾವಿದ ನರಸಿಂಹಮೂರ್ತಿ ಮಾತನಾಡಿ ಕನ್ನಡ ಉಳಿಸಿ ಬೆಳೆಸುವ ಕೆಲಸ ರಂಗಭೂಮಿ ಮಾಡುತ್ತಿದೆ. ಆದರೆ ಮಾತೃಭಾಷೆ ಮೇಲಿನ ಪ್ರೀತಿ ಗೌರವ ನಗರ ಪ್ರದೇಶದಲ್ಲಿ ಕ್ಷೀಣಿಸಿದೆ. ಅನ್ಯ ಭಾಷೆಯ ಜೊತೆ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ ಮಾತೃಭಾಷೆ ಅನ್ಯ ವಲಸಿಗರಿಗೆ ಕಲಿಸುವ ಮೂಲಕ ಕ್ರಾಂತಿ ಮಾಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ವೀರೇಶಸ್ವಾಮಿ, ಲಕ್ಕೇನಹಳ್ಳಿ ನರಸಿಯಪ್ಪ, ಪುಟ್ಟರಾಜು, ಮಲ್ಲೇಶಯ್ಯ, ದೊಡ್ಡಮ್ಮ, ಗೌರಮ್ಮ, ಬಸವರಾಜು, ಅರ್ಚಕರಾದ ಶಿವಮ್ಮ ಸೇರಿದಂತೆ ಮುನೇಶ್ವರ ಸೇವಾ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X