ರಾಯಚೂರು | ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದೇ ಚುನಾವಣಾ‌ಧಿಕಾರಿ ಪರಾರಿ

Date:

Advertisements

ಸರ್ಕಾರಿ ನೌಕರರ ಸಂಘದ ರಾಯಚೂರು ಜಿಲ್ಲಾಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್‌ನ ಚುನಾವಣೆಗೆ ಸಂಬಂಧಿಸಿದಂತೆ ಶುಕ್ರವಾರ ಅಂತಿಮ ಕಣದಲ್ಲಿರುವವರ ಅಭ್ಯರ್ಥಿಗಳನ್ನು ಪ್ರಕಟಿಸಿದೇ ರಾಯಚೂರು ಚುನಾವಣಾಧಿಕಾರಿಯಾಗಿದ್ದ ಭೀಮಪ್ಪ ನಾಯಕ ಅವರು ಪರಾರಿಯಾಗಿದ್ದಾರೆ ಎಂದು ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿ ಮಹಾಂತೇಶ ಬಿರಾದಾರ ಆರೋಪಿಸಿದ್ದಾರೆ.

“ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜ್ಯ ಪರಿಷತ್ ಮತ್ತು ಖಜಾಂಚಿ ಹುದ್ದೆಗೆ ಒಟ್ಟು ಕ್ರಮವಾಗಿ ಅಧ್ಯಕ್ಷ ಹುದ್ದೆಗೆ ಆರು ಜನ ಮತ್ತು ರಾಜ್ಯ ಪರಿಷತ್ ಹಾಗೂ ಖಜಾಂಚಿ ಹುದ್ದೆಗೆ ಮೂರು ಮೂರು ಜನ ನಾಮಪತ್ರ ಸಲ್ಲಿಸಿದ್ದರು. ಶುಕ್ರವಾರ ಭೀಮರಾಜ ಹವಾಲ್ದಾರ್, ಸುರೇಶ ಕುರ್ಡಿ, ರಾಘವೇಂದ್ರ ಎಂಬ ಮೂರು ಮಂದಿ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಅಂತಿಮ ಕಣದಲ್ಲಿ ಮಹಾಂತೇಶ್ ಬಿರಾದಾರ್ ಕೃಷ್ಣ ಮತ್ತು ಆಂಜನೇಯ ಕಾವಲಿ ಅಭ್ಯರ್ಥಿಗಳಾಗಿ ಅಧ್ಯಕ್ಷ ಹುದ್ದೆಗೆ ಉಳಿದಿದ್ದು, ಉಳಿದ ಹುದ್ದೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಯಥಾವತ್ತಾಗಿ ಮೂರು ಮಂದಿ ಕಣದಲ್ಲಿದ್ದಾರೆ. ಆದರೆ, ಕಣದಲ್ಲಿರುವ ಅಂತಿಮ ಪಟ್ಟಿ ಪ್ರಕಟಿಸದೇ ಚುನಾವಣೆ ಅಧಿಕಾರಿ ಭೀಮಪ್ಪ ನಾಯಕ ಅವರು ಅಭ್ಯರ್ಥಿ ಕೃಷ್ಣ ಅವರ ಪರ ಲಾಬಿ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಸಾಹಿತ್ಯ ಪರಿಷತ್‌ನ ಕನ್ನಡ ಭವನಕ್ಕೆ ನಿವೇಶನ ನೀಡುವಂತೆ ಮನವಿ

Advertisements

“ಚುನಾವಣಾಧಿಕಾರಿಯಾಗಿದ್ದ ಭೀಮಪ್ಪ ನಾಯಕ ಅವರು ಕಣದಲ್ಲಿರುವ ಅಂತಿಮ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೇ ಪರಾರಿಯಾಗಿರುವ ಬಗ್ಗೆಯೂ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ” ಎಂದು ಮಹಾಂತೇಶ ಬಿರಾದಾರ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X