ದೇಶದ ಅತ್ಯಂತ ಕಿರಿಯ ಪೈಲಟ್ ಆದ ವಿಜಯಪುರದ ಸಮೈರಾ

Date:

Advertisements

ಗುಮ್ಮಟಿ ನಗರಿ ವಿಜಯಪುರ ಜಿಲ್ಲೆಯ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ ಆಗುವ ಮೂಲಕ ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ.

ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಹೆಚ್ಚು ಪ್ರಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಸೇರಿದಂತೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆ, ವಿಜ್ಞಾನ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಾಧನೆಗೈದವರಿದ್ದಾರೆ. ಇದೀಗ ಮತ್ತೊಂದು ಸಾಧನೆಯಿಂದ ಜಿಲ್ಲೆಯ ಹಾಗೂ ರಾಜ್ಯದ ಹಿರಿಮೆ ಹೆಚ್ಚಿದೆ.

18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಲೆನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಇತಿಹಾಸ ಸೃಷ್ಟಿಸಿರುವ ಸಮೈರಾ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 1991ರ ಕಾನೂನನ್ನು ಕಡೆಗಣಿಸುತ್ತವೆ ಧಾರ್ಮಿಕ ಸ್ಥಳಗಳ ಸಮೀಕ್ಷೆ ಮತ್ತು ದಾವೆಗಳು

ತಮ್ಮ ಶಿಕ್ಷಣವನ್ನು ವಿಜಯಪುರದಲ್ಲಿ ಮುಗಿಸಿ, 6 ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ಟ್ರೇನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ.

ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವೆಡೆಯಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹೆಣ್ಣು ಮಕ್ಕಳನ್ನು ಕಡೆಗಣೆಸುವ ಜನರಿಗೆ ಸಮೈರಾ ಕುಟುಂಬ ಮಾದರಿ ಆಗಿದೆ. ಜೊತೆಗೆ ಇಂದಿನ ಕಾಲದ ಯುವ ಪೀಳಿಗೆಗೆ ಸಮೈರಾ ಸಾಧನೆ ಪ್ರೇರಣೆ ಆಗಿದೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

Download Eedina App Android / iOS

X