ರಾಯಚೂರು | ದಾಳಿ ಮಾಡುತ್ತಿದ್ದ ಮಂಗ ಸೆರೆ

Date:

Advertisements

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುದ್ದಿನ್ನಿ ಗ್ರಾಮದಲ್ಲಿ ಮಂಗವೊಂದು ಸಾರ್ವಜನಿಕರಿಗೆ ಕಚ್ಚುವ ಮೂಲಕ ಭೀತಿಯನ್ನುಂಟುಮಾಡಿತ್ತು. ಅದನ್ನು ಗಂಗಾವತಿ ನುರಿತ ತಂಡವು ಸೆರೆಹಿಡಿದಿದೆ ಎಂದು ಗ್ರಾಮಸ್ಥರು ತಿಳಿಸಿದರು.

ಕಳೆದ ಒಂದುವರೆ ತಿಂಗಳಿನಿಂದ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಕಚ್ಚಿ ಗಾಯಗೊಳಿಸಿ ಕಿರಿಕಿರಿ ಉಂಟುಮಾಡಿತ್ತು. ಮನೆ ಮೇಲೆ ಬಟ್ಟೆ ಹಾಕಲು ಹೋದವರ ಮೇಲೆ ದಾಳಿ ಮಾಡಿ ಕೈ ಮುರಿದು ಗಂಭೀರ ಗಾಯಗೊಳಿಸಿತ್ತು.

ಈ ಬಗ್ಗೆ ಗ್ರಾಮದ ನಿವಾಸಿ ನಾಗರೆಡ್ಡೆಪ್ಪ ದೇವರಮನಿ ಮಾತನಾಡಿ, “ಶಾಲೆಯ ಮೈದಾನದಲ್ಲಿನ ಗಿಡಮರಗಳಲ್ಲಿ ಅತ್ತಿಂದಿತ್ತ ಜಿಗಿಯುತ್ತ, ಶಾಲೆ ಮಕ್ಕಳು ಹಾಲು ಕುಡಿಯುವ ಮತ್ತು ಊಟ ಮಾಡುವ ಸಂದರ್ಭದಲ್ಲಿ ಮಕ್ಕಳ ಮೇಲೆ ದಾಳಿ ಮಾಡಲು ಮುಂದಾಗುತ್ತಿತ್ತು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಮದ್ದೂರು | ಮಣ್ಣಿನ ಆರೋಗ್ಯ, ರೈತರ ಕಲ್ಯಾಣಕ್ಕೆ ಸರ್ಕಾರ ಗಮನಹರಿಸಲಿ: ಚಂದನ್‌ ಗೌಡ

“ಗದ್ದೆಮ್ಮ ನಿಂಗಪ್ಪ ಎನ್ನುವ ಮ‌‌ಹಿಳೆ ಮನೆ ಮಾಳಿಗೆ ಮೇಲೆ ಒಣಸಿದ್ದ ಬಟ್ಟೆಗಳನ್ನು ತರಲು ಹೋದಾಗ ಮಂಗ ದಾಳಿ ಮಾಡಿದ್ದರಿಂದ ಮೆಟ್ಟಿಲುಗಳ ಮೇಲಿಂದ ಕೆಳಗೆ ಬಿದ್ದು ಕೈ ಮೂಳೆ ಮುರಿದುಕೊಂಡಿದ್ದಾರೆ. ಕಲ್ಲಪ್ಪ ಪೂಜಾರಿ ಎನ್ನುವವರ ಮೇಕೆ ಮೇಲೆ ದಾಳಿ ಮಾಡಿ ಸಾಯಿಸಿತ್ತು” ಎಂದರು.

“ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದಾಗ ಎಚ್ಚೆತ್ತುಕೊಂಡು ಗಂಗಾವತಿ ನುರಿತ ತಂಡದ ನೇತೃತ್ವದಲ್ಲಿ ಸೆರೆ ಹಿಡಿಯಲಾಗಿದೆ. ದಾಳಿಗೊಳಗಾದ ಸಂತ್ರಸ್ತ ಮಹಿಳೆಗೆ ಪರಿಹಾರ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X