ಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಯ್‌ ಶಾ

Date:

Advertisements

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ(ಐಸಿಸಿ) ನೂತನ ಅಧ್ಯಕ್ಷರಾಗಿ ಜಯ್‌ ಶಾ ಅಧಿಕಾರ ವಹಿಸಿಕೊಂಡಿದ್ದಾರೆ.

2024ರ ಆಗಸ್ಟ್‌ 27ರಂದು ಜಯ್ ಶಾ ಐಸಿಸಿ ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2020ರಿಂದ ಅಧ್ಯಕ್ಷರಾಗಿದ್ದ ಗ್ರೆಗ್ ಬಾರ್ಕ್ಲೇ ಮೂರನೇ ಅವಧಿಯನ್ನು ಬಯಸದಿರಲು ನಿರ್ಧರಿಸಿದ ನಂತರ ಜಯ್‌ ಶಾ ಆ ಸ್ಥಾನಕ್ಕೆ ಏಕೈಕ ನಾಮನಿರ್ದೇಶಿತರಾಗಿದ್ದರು.

ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಭಾಷಣ ಮಾಡಿದ ಜಯ್‌ ಶಾ, ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕ್ರಿಕೆಟ್‌ ಸೇರ್ಪಡೆ, ಮಹಿಳಾ ಕ್ರಿಕೆಟ್‌ ಆಟದಲ್ಲಿ ಮತ್ತಷ್ಟು ಬೆಳವಣಿಗೆ ತರಬೇಕೆಂಬ ವಿಷಯಗಳ ಬಗ್ಗೆ ಬೆಳಕು ಚೆಲ್ಲಿದರು.

Advertisements

ಈ ಸುದ್ದಿ ಓದಿದ್ದೀರಾ? ಐಪಿಎಲ್ ಜನಪ್ರಿಯತೆ | ಮನರಂಜನೆ, ಬಹುಕೋಟಿ ಆದಾಯ ಹಾಗೂ ಕರಾಳ ಮುಖ

ಐಸಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುತ್ತಿರುವುದು ನನಗೆ ಹೆಮ್ಮೆ. ಐಸಿಸಿ ನಿರ್ದೇಶಕರು ಹಾಗೂ ಸದ್ಯರ ಬೆಂಬಲ ಮತ್ತು ಅಪಾರವಾದ ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ. 2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತಯಾರಿ ಮಾಡಿಕೊಳ್ಳಲು ಇದು ಉತ್ತಮ ಸಮಯವಾಗಿದೆ. ಇದರಿಂದ ಕ್ರಿಕೆಟ್‌ ವಿಶ್ವದಾದ್ಯಂತ ಇನ್ನೂ ಹೆಚ್ಚಿನ ಅಭಿಮಾನಿಗಳನ್ನು ಒಳಗೊಳ್ಳಲಿದೆ. ಮುಂದಿನ ಎಲ್ಲ ಅವಕಾಶಗಳನ್ನ ಬಳಸಿಕೊಂಡು ಕ್ರೀಡೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಐಸಿಸಿ ತಂಡ ಮತ್ತು ಸದಸ್ಯ ರಾಷ್ಟ್ರಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

2009ರಲ್ಲಿ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ ಸೇರಿದ ಜಯ್‌ ಶಾ 2019ರಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಕಿರಿಯ ಗೌರವ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇದರೊಂದಿಗೆ ಐಸಿಸಿಯ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಅಧ್ಯಕ್ಷರಾಗಿ ಪ್ರಮುಖ ಕ್ರಿಕೆಟ್‌ ಸಂಸ್ಥೆಗಳನ್ನು ಮುನ್ನಡೆಸುವ ಸಾಮರ್ಥ್ಯ ತೋರಿದ್ದರು. ಇದೀಗ 2024ರಲ್ಲಿ ಐಸಿಸಿ ಮುಖ್ಯಸ್ಥರಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X