ರಾಜ್ಯದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಟ್ಯೂಷನ್ ಕೇಂದ್ರಗಳ ವಿರುದ್ಧ ಸಾಕ್ಷರತಾ ಇಲಾಖೆ ಕ್ರಮ

Date:

Advertisements

ಟ್ಯೂಷನ್‌ ಕೇಂದ್ರಗಳ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳು ಶಾಲೆಯ ಸಾಮಾನ್ಯ ತರತಿಗತಿಗಳನ್ನು ತಪ್ಪಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಕ್ರಮ ಟ್ಯೂಷನ್ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಸಜ್ಜಾಗಿದೆ.

ಉತ್ತರದ ಜಿಲ್ಲೆಗಳಲ್ಲಿ ಈ ಪದ್ಧತಿ ವ್ಯಾಪಕವಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಪ್ರಕಾರ, ಹೆಚ್ಚಿನ ಅನಧಿಕೃತ ಟ್ಯುಟೋರಿಯಲ್ ಕೇಂದ್ರಗಳು ರಾಜ್ಯದ ಜನಪ್ರಿಯ ಸರ್ಕಾರಿ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕಾಗಿ ಕೋಚಿಂಗ್ ತರಗತಿಗಳನ್ನು ನಡೆಸುತ್ತವೆ.

“ವಿದ್ಯಾರ್ಥಿಗಳು ನಿಯಮಿತವಾಗಿ ಕೋಚಿಂಗ್ ಕೇಂದ್ರಗಳಿಗೆ ಹಾಜರಾಗುತ್ತಿದ್ದು, ತಮ್ಮ ಪರೀಕ್ಷೆಗಳನ್ನು ಬರೆಯಲು ಮಾತ್ರ ತಮ್ಮ ಶಾಲೆಗಳಿಗೆ ಮರಳುತ್ತಿದ್ದಾರೆ. ಈ ಟ್ಯುಟೋರಿಯಲ್ ಕೇಂದ್ರಗಳಲ್ಲಿ ವಾರ್ಷಿಕ ಶುಲ್ಕ ₹40,000ದಿಂದ ₹50,000ದವರೆಗೆ ಇರುತ್ತದೆ” ಎಂದು ವಿಜಯಪುರದ ಖಾಸಗಿ ಶಾಲಾ ಮಾಲೀಕರು ತಿಳಿಸಿದ್ದಾರೆ.

Advertisements

ಇಲಾಖೆಯ ಆಯುಕ್ತ ತ್ರಿಲೋಕ್ ಚಂದ್ರ ಬಿ ವಿ ಸುತ್ತೋಲೆ ಹೊರಡಿಸಿದ್ದು, ಎಲ್ಲ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕರು(ಡಿಡಿಪಿಐಗಳು) ನೋಂದಣಿಯಾಗದ ಟ್ಯುಟೋರಿಯಲ್‌ಗಳನ್ನು ಗುರುತಿಸಿ ಇಲಾಖೆಗೆ ವರದಿ ನೀಡುವಂತೆ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಗುಮ್ಮಲ ಡ್ಯಾಂನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ವಿಜಯನಗರ ಜಿಲ್ಲೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹಲವಾರು ವಿದ್ಯಾರ್ಥಿಗಳು ಅನಧಿಕೃತ ಕೋಚಿಂಗ್ ಕೇಂದ್ರಗಳಲ್ಲಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು. ಅನಧಿಕೃತ ಕೋಚಿಂಗ್ ಕೇಂದ್ರಗಳನ್ನು ನಿಗ್ರಹಿಸಲು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನವೆಂಬರ್ 26ರಂದು ಹೊರಡಿಸಿದ ನೋಟಿಸ್‌ನಲ್ಲಿ, “ಕೋಚಿಂಗ್ ಕೇಂದ್ರಗಳು ಅನಧಿಕೃತವಾಗಿ ನಡೆಯುತ್ತಿರುವುದು ಕಂಡುಬಂದರೆ, ಶಿಕ್ಷಣ ಕಾಯ್ದೆಗೆ ಅನುಗುಣವಾಗಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು” ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X