ಆಂಧ್ರದಲ್ಲಿ ‘ವಕ್ಫ್‌ ಬೋರ್ಡ್‌’ನ ಮಂಡಳಿಯನ್ನು ವಜಾಗೊಳಿಸಿದ ನಾಯ್ಡು ಸರ್ಕಾರ

Date:

Advertisements

ಕರ್ನಾಟಕದಲ್ಲಿ ವಕ್ಫ್‌ ಆಸ್ತಿ ವಿಚಾರವನ್ನು ಬಿಜೆಪಿ ವಿವಾದವಾಗಿ ಮಾರ್ಪಡಿಸಿದೆ. ಇದೇ ಸಮಯದಲ್ಲಿ, ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ವಕ್ಫ್‌ ಮಸೂದೆ ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ, ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿರುವ ಅಂಧ್ರದ ಟಿಡಿಪಿ ಸರ್ಕಾರ ಆಂಧ್ರ ಪ್ರದೇಶದಲ್ಲಿ ವಕ್ಫ್‌ ಬೋರ್ಡ್‌ನ ಮಂಡಳಿಯನ್ನು ವಜಾಗೊಳಿಸಿದೆ.

ಟಿಡಿಪಿ ನಾಯಕ, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಆಂದ್ರ ಸರ್ಕಾರ, ವಕ್ಫ್‌ ಬೋರ್ಡ್‌ನ ಮಂಡಳಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹಿಂದಿನ ಸರ್ಕಾರ, ಅಂದರೆ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರ ಸರ್ಕಾರ ವಕ್ಫ್‌ ಬೋರ್ಡ್‌ಗೆ ಮಂಡಳಿಯನ್ನು ರಚಿಸಿತ್ತು. ಇದೀಗ, ನಾಯ್ಡು ನೇತೃತ್ವದ ಸರ್ಕಾರ ಆ ಮಂಡಳಿಯನ್ನು ರದ್ದು ಮಾಡಿದೆ.

ಈ ಬಗ್ಗೆ ಕಾನೂನು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್.ಎಂ.ಡಿ ಫಾರೂಕ್ ಮಾಹಿತಿ ನೀಡಿದ್ದಾರೆ. “ಹಿಂದಿನ ಸರ್ಕಾರದ ಕ್ರಮಗಳಿಂದಾಗಿ ವಕ್ಫ್ ಬೋರ್ಡ್‌ನ ಮಂಡಳಿ ಹಲವಾರು ಕಾನೂನು ಮತ್ತು ಆಡಳಿತಾತ್ಮಕ ಸವಾಲುಗಳನ್ನು ಎದುರಿಸಿತ್ತು. ಇಂದಿನ ನಾಯ್ಡು ನೇತೃತ್ವದ ಸರ್ಕಾರವು ಆ ಸಮಸ್ಯೆಗಳನ್ನು ಪರಿಹರಿಸುವ ಗುರಿ ಹೊಂದಿದೆ. ವಕ್ಫ್ ಆಸ್ತಿಗಳನ್ನು ರಕ್ಷಿಸಲು ಮತ್ತು ಅದರ ಹೊಸ ನಿರ್ದೇಶನಗಳ ಅಡಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣವನ್ನು ಉತ್ತೇಜಿಸಲು ಸರ್ಕಾರವು ಬದ್ಧವಾಗಿದೆ” ಎಂದು ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X