ಆಂಧ್ರದಲ್ಲಿ ಮಳೆ ಅಬ್ಬರ; ಕರ್ನಾಟಕದಲ್ಲಿ ಅರ್ಭಟಿಸಲಿದೆ ಮಳೆ

Date:

Advertisements

ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್‌ ಚಂಡಮಾರುತದಿಂದಾಗಿ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ತಮಿಳುನಾಡು ತತ್ತರಿಸಿಹೋಗಿದೆ. ಇದೀಗ, ಆಂಧ್ರ ಪ್ರದೇಶದಲ್ಲಿಯೂ ಮಳೆ ಅಬ್ಬರ ಹೆಚ್ಚಾಗಿದೆ. ಆಂಧ್ರದ ತಿರುಪತಿ, ತಿರುಮಲ, ರಾಯಲ್‌ಸೀಮಾ, ಕಡಲೂರು, ನೆಲ್ಲೂರು ಮತ್ತು ಪ್ರಕಾಶಂ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. 70/90 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಶುಕ್ರವಾರದಿಂದಲೂ ಆಂಧ್ರದಲ್ಲಿ ಮಳೆಯಾಗುತ್ತಿದೆ. ಭಾನುವಾರವೂ ಮುಂದುವರೆದಿದೆ. ಹಲವು ನಗರಗಳಲ್ಲಿ ವಸತಿ ಪ್ರದೇಶಗಳು ಜಾಲಾವೃತಗೊಂಡಿವೆ. ಕೃಷಿ ಭೂಮಿಗೂ ನೀರು ನುಗ್ಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕೇಳಿದೆ.

ಈಗಾಗಲೇ ತಮಿಳುನಾಡಿನಲ್ಲಿ ಮಳೆ ಅಬ್ಬರದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿ ಪ್ರದೇಶವೇ ಆಗಿರುವ ಚೆನ್ನೈನ ರಸ್ತೆಗಳಲ್ಲಿ ನೀರು ತುಂಬಿದೆ. ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಆಸ್ಪತ್ರೆಗಳಿಗೂ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ.

Advertisements

ಇನ್ನು, ಕರ್ನಾಟಕದಲ್ಲಿಯೂ ಸಾಧರಣ ಮಳೆಯಾಗುತ್ತಿದೆ. ಆದಾಗ್ಯೂ, ತುಮಕೂರು, ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಹಾಗೂ ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

Download Eedina App Android / iOS

X