ಫೆಂಗಲ್ ಚಂಡಮಾರುತ | ಪ್ರವಾಹದಲ್ಲಿ ಕೊಚ್ಚಿ ಹೋದ ಬಸ್‌ಗಳು; ವಿಡಿಯೋ ವೈರಲ್

Date:

Advertisements

ತಮಿಳುನಾಡು ಮತ್ತು ಪುದುಚೇರಿಯಲ್ಲಿ ಫೆಂಗಲ್ ಚಂಡಮಾರುತವು ಭೂಕುಸಿತವನ್ನು ಉಂಟು ಮಾಡಿದೆ. ಭಾನುವಾರವೇ ಚಂಡಮಾರುತದ ತೀವ್ರತೆ ಕಡಿಮೆಯಾಗಿದೆ. ಆದರೆ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಉಂಟಾಗಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಅತೀ ಹೆಚ್ಚು ಹಾನಿ ಉಂಟಾಗಿದೆ. ಹಲವು ವಾಹನಗಳು ರಸ್ತೆಯಿಂದ ತಗ್ಗು ಪ್ರದೇಶಕ್ಕೆ ಉರುಳಿದೆ. ಕೃಷ್ಣಗಿರಿಯ ಉತ್ತಂಗಿರಿ ಬಸ್ ನಿಲ್ದಾಣದಲ್ಲಿ ಹಲವು ಬಸ್‌ಗಳು ಮತ್ತು ಇತರ ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿದೆ.

ಕೆಲವು ಬಸ್ಸುಗಳು ಮತ್ತು ಕಾರುಗಳು ವೇಗವಾಗಿ ಹರಿಯುವ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Advertisements

ಇದನ್ನು ಓದಿದ್ದೀರಾ? ಫೆಂಗಲ್ ಚಂಡಮಾರುತ‌ | ಧಾರಾಕಾರ ಮಳೆಗೆ ಮಲಗಿದ ರಾಗಿ-ಭತ್ತದ ಫಸಲು; ರೈತ ಕಂಗಾಲು

ಅಧಿಕಾರಿಗಳ ಪ್ರಕಾರ, ಕೃಷ್ಣಗಿರಿ ಜಿಲ್ಲೆಯಲ್ಲಿ ಸತತ 14 ಗಂಟೆಗಳಿಂದ ಕಾಲ ಭಾರೀ ಮಳೆಯಾಗುತ್ತಿದೆ. ಉತ್ತಂಗರೈ ಪ್ರದೇಶದಲ್ಲಿ ಕಳೆದ ರಾತ್ರಿ ಅತಿ ಹೆಚ್ಚು ಮಳೆಯಾಗಿದೆ. ಇನ್ನು ಈಗಾಗಲೇ ಫೆಂಗಲ್ ಚಂಡಮಾರುತಕ್ಕೆ 8 ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡು ಮತ್ತು ಪುದುಚೇರಿ ಪ್ರದೇಶಗಳಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಪುದುಚೇರಿಯಲ್ಲಿ ಪ್ರವಾಹದಲ್ಲಿ ಮುಳುಗಿದ್ದ ಮನೆಯೊಂದರಲ್ಲಿ ಸಿಲುಕಿದ್ದ ಶಿಶುವನ್ನು ಭಾರತೀಯ ಸೇನೆಯು ಮುಂಜಾನೆ ರಕ್ಷಿಸಿದೆ. ಹಲವೆಡೆ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಈ ನಡುವೆ ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿ ಡಿಸೆಂಬರ್ 5ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕರ್ನಾಟಕ ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಸಂಚಾರ ವ್ಯತ್ಯಯವಾಗಿದೆ.

ಇನ್ನು ಪುದುಚೇರಿಯಲ್ಲಿ ಎಲ್ಲಾ ಪಡಿತರ ಚೀಟಿದಾರರಿಗೆ 5000 ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಎನ್‌ ರಂಗಸಾಮಿ ಘೋಷಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X