ತುಮಕೂರು | ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟ

Date:

Advertisements

ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಶೋರೂಂನಲ್ಲಿದ್ದಂತಹ ಬೈಕ್‌, ಕಂಪ್ಯೂಟರ್‌ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುರುವೇಕೆರೆ ಪಟ್ಟಣದ ವೈ ಟಿ ರಸ್ತೆಯಲ್ಲಿನ ಜೆಮೊಪೈ ಎಂಬ ಎಲೆಕ್ಟ್ರಿಕ್ ಬೈಕ್ ಶೋ ರೂಂಗೆ ಸೋಮವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿವೆ.

ತಾಲೂಕಿನ ಅರಳಿಕೆರೆ ಗ್ರಾಮದ ಮೋಹನ್‌ಗೆ ಸೇರಿದ ಬೈಕ್ ಶೋ ರೂಂನಲ್ಲಿ ಕಾಣಿಸಿಕೊಂಡ ಬೆಂಕಿಗೆ ಆಹುತಿಯಾದ ಎರಡು ಬೈಕ್‌ಗಳು ಸುಟ್ಟು ಕರಕಲಾಗಿದ್ದರೆ, ಉಳಿದ ಬೈಕ್‌ಗಳು ಬೆಂಕಿಗೆ ಹಾನಿಯಾಗಿವೆ.

Advertisements

ಶೋ ರೂಂನ ಕೆಲಸಗಾರರು ಹಳೆಯ ಬ್ಯಾಟರಿ ಚಾರ್ಜಿಗೆ ಹಾಕಿ ಹೊರಗೆ ಹೋಗಿದ್ದರು. ಬ್ಯಾಟರಿ ಸಿಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಶೋ ರೂಂ ಸೇರಿ ಅಕ್ಕ-ಪಕ್ಕದ ಪ್ರದೇಶದಲ್ಲಿಯೂ ದಟ್ಟ ಹೊಗೆ ಆವರಿಸಿತ್ತು.‌

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ‘ಬಹುಸಂಸ್ಕೃತಿ ಉತ್ಸವ’ ಮುಂದೂಡಿಕೆ

ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶೋ ರೂಂ‌ ಸಿಬ್ಬಂದಿಯ ಸಹಕಾರದಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

Download Eedina App Android / iOS

X