ಬಿಬಿಎಂಪಿ ಮಾಜಿ ಸದಸ್ಯೆ ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಯತ್ನಿಸಿದ್ದ ಮುನಿರತ್ನ

Date:

Advertisements

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಿನಕಳೆಂದು ಮತ್ತೊಂದು ಮಗದೊಂದು ಆರೋಪಗಳು ಕೇಳಿಬರುತ್ತಿವೆ. ಜಾತಿ ನಿಂದನೆ, ಹನಿಟ್ರ್ಯಾಪ್‌, ಎಚ್‌ಐವಿ ಸೋಂಕಿತ ರಕ್ತ ಚುಚ್ಚಲು ಸಂಚು ಸೇರಿದಂತೆ ನಾನಾ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿಬಂದಿದೆ. ಬಿಬಿಎಂಪಿಯ ಮಾಜಿ ಸದಸ್ಯೆ (ಕಾರ್ಪೋರೇಟರ್‌) ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಯತ್ನಿಸಿದ್ದರು ಎಂದು ಸಂತ್ರಸ್ತೆಯ ಪತಿ ಆರೋಪಿಸಿದ್ದಾರೆ. ಎಸ್‌ಐಟಿ ಮುಂದೆ ದಾಖಲೆ ಸಲ್ಲಿಸಲು ಸಜ್ಜಾಗಿದ್ದಾರೆ.

ತಮ್ಮನ್ನು ಕೊಲೆ ಮಾಡಲು ಮುನಿರತ್ನ ಸಂಚು ಹೂಡಿದ್ದರು. ಕೊಲೆಗೆ ಸುಪಾರಿ ಕೊಟ್ಟಿದ್ದರು ಎಂದು ಆರೋಪಿಸಿ ಶನಿವಾರ ನಂದಿನಿ ಲೇಔಟ್ ಪೊಲೀಸ್‌ ಠಾಣೆಯಲ್ಲಿ ಲಗ್ಗೆರೆಯ ಮಾಜಿ ಕಾರ್ಪೋರೇಟರ್‌ ಮಂಜುಳಾ ಮತ್ತು ಅವರ ಪತಿ ನಾರಾಯಣಸ್ವಾಮಿ ದೂರು ದಾಖಲಿಸಿದ್ದರು. ಇದೀಗ, ಹನಿಟ್ರ್ಯಾಪ್‌ ಮಾಡಲು ತಮ್ಮ ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಮುನಿರತ್ನ ಯತ್ನಿಸಿದ್ದರು ಎಂದು ಮತ್ತೊಂದು ಆರೋಪ ಮಾಡಿದ್ದಾರೆ.

ನಾರಾಯಣಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿದ್ದು, “ನಮ್ಮ ವಿರುದ್ಧ ಮುನಿರತ್ನ ಷಡ್ಯಂತ್ರ ನಡೆಸಿದ್ದಾರೆ. ಅವರ ಷಡ್ಯಂತ್ರಗಳ ವಿಡಿಯೋ ಮತ್ತು ಆಡಿಯೋ ದಾಖಲೆಗಳು ನಮ್ಮ ಬಳಿಯಿವೆ. ನನ್ನ ಪತ್ನಿಯ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಲು ಮುನಿರತ್ನ ಯತ್ನಿಸಿದ್ದರು. ನಮ್ಮ ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಪ್ರಯತ್ನಿಸಿದ್ದರು” ಎಂದು ಆರೋಪಿಸಿದ್ದಾರೆ.

Advertisements

“ನಮ್ಮ ಮನೆ ಕೆಲಸದವರಿಗೆ ಕೋಟಿ ರೂಪಾಯಿ ಆಫರ್ ಕೊಟ್ಟು ಬೆಡ್ ರೂಂನಲ್ಲಿ ಕ್ಯಾಮರಾ ಇಡಲು ಯತ್ನಿಸಿದ್ದರು. ರಮೇಶ್ ಜಾರಕಿಹೊಳಿ ವಿಡಿಯೋ ಹೊರಬಂದ ಸಮಯದಲ್ಲೇ ನಮ್ಮ ಖಾಸಗಿ ವಿಡಿಯೋಗಳನ್ನು ಚಿತ್ರಸಿಲು ಯತ್ನಿಸಿದ್ದರು. ಇದೇ ರೀತಿ ಹಲವರ ವಿಡಿಯೋ ಮಾಡಿಕೊಂಡು ದೊಡ್ಡ ದೊಡ್ಡವರನ್ನೇ ಮುನಿರತ್ನ ಬ್ಲಾಕ್‌ಮೇಲ್‌ ಮಾಡಿದ್ದಾರೆ. ನಮ್ಮ ವಿರುದ್ಧದ ಪಿತೂರಿಯ ಎಲ್ಲ ದಾಖಲೆಗಳನ್ನು ಎಸ್‌ಐಟಿಗೆ ಒದಗಿಸುತ್ತೇವೆ” ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X