ಬೆಳಗಾವಿ | ಎಟಿಎಂಗೆ ತಾನೇ ತುಂಬಿಸಿದ ಹಣವನ್ನು ತಾನೇ ಕದ್ದ ಬ್ಯಾಂಕ್‌ ಸಿಬ್ಬಂದಿ

Date:

Advertisements

ಬ್ಯಾಂಕ್‌ ಸಿಬ್ಬಂದಿಯೊಬ್ಬ ಎಟಿಎಂಗೆ ಹಣ ತುಂಬಿಸಿ, ಬಳಿಕ ಆ ಹಣವನ್ನು ತಾನೇ ಕದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಹೆಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಟಿಎಂ ಕಸ್ಟೋಡಿಯನ್‌ ಆಗಿ ಕೆಲಸ ಮಾಡುತ್ತಿದ್ದ ಕೃಷ್ಣಾ ಸುರೇಶ್ ದೇಸಾಯಿ ಬಂಧಿತ ಆರೋಪಿ. ಈತ ಎಟಿಎಂನಲ್ಲಿ ಹಣ ಕದ್ದಿದ್ದು, ಕದ್ದ ಹಣದಲ್ಲಿ ತನ್ನ ತಾಯಿಗೆ ಚಿನ್ನದ ಸರ ಮಾಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಕೃಷ್ಣ ನಿತ್ಯ ಬ್ಯಾಂಕ್‌ನಿಂದ ಹಣ ತಂದು ನಗರದ ಎಲ್ಲ ಹೆಚ್‌ಡಿಎಫ್‌ಸಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದರು. ನವೆಂಬರ್ 26ರಂದು ಬೆಳಗಾವಿಯ ಕೋರ್ಟ್ ಎದುರಿನ ಹೆಚ್‌ಡಿಎ‌ಫ್‌ಸಿ ಎಟಿಎಂಗೆ ಎಂದಿನಂತೆ ಹಣ ಹಾಕಿ ಹೋಗಿದ್ದಾರೆ. ಅದಾದ, 2 ಗಂಟೆಗೆ ಬಳಿಕ ಮತ್ತೆ ಎಟಿಎಂಗೆ ಬಂದ ಕೃಷ್ಣಾ, ಎಟಿಎಂನ ಲಾಕ್ ಓಪನ್ ಮಾಡಿ 8.65 ಲಕ್ಷ ರೂ. ಹಣ ಕದ್ದು ಪರಾರಿಯಾಗಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Advertisements

ಎಟಿಎಂನಲ್ಲಿ ಹಣ ಕಳ್ಳತನವಾಗಿರುವ ಬಗ್ಗೆ ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಅಧಿಕಾರಿಗಳು ಬೆಳಗಾವಿಯ ಮಾರ್ಕೆಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಕ್ಯಾಮೆರಾದ ವಿಡಿಯೋಗಳನ್ನು ಪರಿಶೀಲಿಸಿದ್ದು, ಆರೋಪಿ ಕೃಷ್ಣಾನನ್ನು ಬಂಧಿಸಿದ್ದಾರೆ.

“ಆರೋಪಿ ಕೃಷ್ಣಾ ಬಳಿ ಎಟಿಎಂ ಕೀಲಿ ಇತ್ತು. ಆ ಕೀಲಿ ಬಳಸಿ ಎಟಿಎಂನಿಂದ 8.65 ಲಕ್ಷ ರೂ. ಹಣ ಕದ್ದಿದ್ದಾನೆ. ಕದ್ದ ಹಣದಲ್ಲಿ ತನ್ನ ತಾಯಿಗಾಗಿ ‌1.54 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಖರೀದಿಸಿದ್ದಾನೆ. ಮೋಜು-ಮಸ್ತಿಗೂ ಹಣ ಬಳಸಿಕೊಂಡಿದ್ದಾನೆ. ಚಿನ್ನದ ಸರ ಮತ್ತು 5.74 ಲಕ್ಷ ರೂ. ಹಣವನ್ನು ಕೃಷ್ಣಾನಿಂದ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X