ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ‌; ಶಾಲಾ ಶಿಕ್ಷಕ ಹಾಜಿಮಲಂಗ ಗಿಣಿಯಾರ ಬಂಧನ

Date:

Advertisements

ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಿಣಿಯಾರ ಎಂಬಾತನನ್ನು ಕಲಬುರಗಿ ಜಿಲ್ಲೆಯ ಯಡ್ರಾಮಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಹಾಜಿಮಲಂಗ ಎಂಬಾತ ಶಾಲಾ ತರಗತಿಗಳು ಮುಗಿದ ಬಳಿಕ ಟ್ಯೂಷನ್ ಕ್ಲಾಸ್‌ ಮಾಡುವುದಾಗಿ ಕೆಲವು ಮಕ್ಕಳನ್ನು ರಾತ್ರಿ ಶಾಲೆಯಲ್ಲಿ ಉಳಿಸಿಕೊಳ್ಳುತ್ತಿದ್ದು, ಕ್ಲಾಸ್ ತೆಗೆದುಕೊಂಡು ಬೆಳಗ್ಗೆ ಅವರನ್ನು ಮನೆಗೆ ಕಳುಹಿಸುತ್ತಿದ್ದರು. ಮೇ ತಿಂಗಳಲ್ಲಿ 11 ವರ್ಷದ ಬಾಲಕಿಗೆ ರಕ್ತಸ್ರಾವವಾಗಿತ್ತು. ಮಗಳು ಋತುಮತಿ(ಮುಟ್ಟು) ಆಗಿರಬಹುದೆಂದು ಪೋಷಕರು ಸುಮ್ಮನಿದ್ದು, ಎಂದಿನಂತೆ ಶಾಲೆಗೆ ಕಳುಹಿಸಿದ್ದರು. ಅಂದಿನ ರಕ್ತಸ್ರಾವ ಅತ್ಯಾಚಾರದಿಂದಾಗಿತ್ತು ಎಂಬುದು ಅವರಿಗೆ ತಡವಾಗಿ ತಿಳಿದುಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಕಿಗೆ ಹೆಚ್ಚಿನ ಅಂಕದ ಆಮಿಷವೊಡ್ಡಿದ್ದ ಹಾಜಿಮಲಂಗ, ಜೀವ ಬೆದರಿಕೆ ಹಾಕಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಯಾರಿಗೂ ಹೇಳದಂತೆ ಬೆದರಿಕೆಯನ್ನೂ ಹಾಕಿದ್ದನೆಂದು ತಿಳಿದುಬಂದಿದೆ. ನವೆಂಬರ್ 29ರ ರಾತ್ರಿ ಬಾಲಕಿಯನ್ನು ಸಿಬ್ಬಂದಿ ಕೋಣೆಗೆ ಕರೆದೊಯ್ದು ಮತ್ತೊಮ್ಮೆ ಕೃತ್ಯ ಎಸಗಿದ್ದಾನೆ. ಬಾಲಕಿಯು ಈ ಬಗ್ಗೆ ತನ್ನ ಪರಿಚಯಸ್ಥರಿಗೆ ತಿಳಿಸಿದ ಬಳಿಕ ಪೋಷಕರಿಗೆ ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.

Advertisements

ಶಿಕ್ಷಕನ ಕೃತ್ಯವನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಶಾಸಕರು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಪಟ್ಟು ಹಿಡಿದು ಕುಳಿತಿದ್ದಾರೆ. ಪ್ರತಿಭಟನೆಗೆ ಬೆಂಬಲವಾಗಿ ವಿದ್ಯಾರ್ಥಿಗಳು ಶಾಲೆ–ಕಾಲೇಜುಗಳ ತರಗತಿಗಳಿಂದ ಹೊರಗೆ ಉಳಿದಿದ್ದು, ವ್ಯಾಪಾರಸ್ಥರು ತಮ್ಮ ಅಂಗಡಿ, ಮುಂಗಟ್ಟುಗಳ ಬಾಗಿಲು ಬಂದ್‌ ಮಾಡಿದ್ದಾರೆ. ಬಸ್ ಸಂಚಾರವೂ ಸ್ಥಗಿತವಾಗಿದೆ.

“ಕ್ಷೇತ್ರದ ಶಾಸಕರು ಶಿಕ್ಷಣ ಸಚಿವರೊಂದಿಗೆ ಮಾತನಾಡಿ, ಮಕ್ಕಳ ರಕ್ಷಣೆಯ ಭರವಸೆ ನೀಡಬೇಕು. ಶಾಸಕರು ಬರವವರೆಗೂ ರಸ್ತೆ ಬಿಟ್ಟು ಕದಲುವುದಿಲ್ಲ. ಸ್ಥಳಕ್ಕೆ ಬರಲು ವಿಳಂಬ ಮಾಡಿದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ. ಹೆಣ್ಣುಮಕ್ಕಳ ಕೈಗೆ ಕಲ್ಲುಗಳು ಬರುವ ಮೊದಲು ಅಧಿಕಾರಿಗಳು ಸ್ಥಳಕ್ಕೆ ಬರಬೇಕು” ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ಪ್ರಕರಣದ ಕುರಿತು ಮಾಹಿತಿ ಪಡೆಯಲು ಈ ದಿನ.ಕಾಮ್‌ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಅವರನ್ನು ಸಂಪರ್ಕಿಸಿದಾಗ, ಬ್ಯುಸಿ ಇರುವುದಾಗಿ ತಿಳಿಸಿದ ಅವರು ಯಾವುದೇ ಮಾಹಿತಿ ನೀಡದೆ ಕರೆ ಕಡಿತಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಾಸಕ ಸ್ಥಾನದಿಂದ ಯತ್ನಾಳ ವಜಾಕ್ಕೆ ಬಸವಪರ ಸಂಘಟನೆಗಳ ಆಗ್ರಹ

ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ, ಆಂದೋಲಾ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ವಿಶ್ವನಾಥ ಜಿ ಪಾಟೀಲ ಸೇರಿದಂತೆ ಬಹುತೇಕರು ಇದ್ದರು.

ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ, ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X