ಬೆಳಗಾವಿ | ಅಕ್ರಮ ಚಟುವಟಿಕೆ ತಾಣವಾದ ಇಂದಿರಾ ಕ್ಯಾಂಟಿನ್; ಅಧಿಕಾರಿಗಳ ನಿರ್ಲಕ್ಷ್ಯ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟಿನ್, ಪಟ್ಟಣ ಪ್ರದೇಶಗಳಿಗೆ ದುಡಿಯಲು ಬರುವ ಕೂಲಿ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು ಹಾಗೂ ನಿರ್ಗತಿಕರು ಯಾರೂ ಕೂಡಾ ಹಸಿವಿನಿಂದ ಕಂಗಾಲಾಗಬಾರದೆಂಬ ಉದ್ದೇಶದಿಂದ 2017ರಲ್ಲಿ ಜಾರಿಗೆ ತಂದ ಜನಪರ ಯೋಜನೆ. ‌

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗದೆ ಅರ್ಧಕ್ಕೆ ನಿಂತಿದ್ದು, ಸದ್ಯ ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಜತೆಗೆ ಇಂದಿರಾ ಕ್ಯಾಂಟಿನ್ ಸ್ಥಳವನ್ನು ಜನರು ಶೌಚಕ್ಕೆ ಬಳಸಿಕೊಳ್ಳುತ್ತಿರುವುದು ಅಥಣಿ ಪಟ್ಟಣದ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ಈ ಕುರಿತು ಸ್ಥಳೀಯ ಉಮರ್ ಸೈಯ್ಯದ್ ಮಾತನಾಡಿ, “ಸಿದ್ದರಾಮಯ್ಯನವರ ಕನಸು ಇಂದಿರಾ ಕ್ಯಾಂಟಿನ್ ಯೋಜನೆಯನ್ನು ಶಾಸಕ ಲಕ್ಷ್ಮಣ್ ಸವದಿಯವರು ಅಥಣಿ ಪಟ್ಟಣಕ್ಕೆ ತರುವಲ್ಲಿ ಯಶಸ್ವಿಯಾದರೂ ಕೂಡಾ ಇಲ್ಲಿನ ಅಧಿಕಾರಿಗಳು ಜನಸಂದಣಿಯಿಲ್ಲದ ಜಾಗದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಬಸವೇಶ್ವರ ವೃತ್ತ, ಅನಂತಪುರ ವೃತ್ತ ಅಥವಾ ಅಂಬೇಡ್ಕರ್ ವೃತ್ತ ಪ್ರದೇಶದಲ್ಲಿ ನಿರ್ಮಾಣ ಮಾಡಬೇಕಿತ್ತು. ಇದರಿಂದ ಜನರಿಗೆ ಅನುಕೂಲವಾಗುತ್ತಿತ್ತು. ಆದರೆ ಇಲ್ಲಿ ಜನ ಈ ಸ್ಥಳವನ್ನು ಶೌಚಕ್ಕೆ ಬಳಸಿಕೊಳ್ಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements
ಇಂದಿರಾ ಕ್ಯಾಂಟಿನ್‌ 1

ಸಾಮಜಿಕ ಹೋರಾಟಗಾರ ಶಿವಾನಂದ ಸೌಧಾಗರ ಈ ದಿನ.ಕಾಮ್ ಜೊತೆ ಮಾತನಾಡಿ, “ಅಥಣಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಸುಮಾರು ಶೇ.60ರಷ್ಟು ನಿರ್ಮಾಣವಾಗಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾಗಿಲ್ಲ. ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಆಯುವ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟಿನ್‌ನಲ್ಲಿ ಊಟ ಉಪಹಾರ ಸಿಗುತ್ತದೆ. ಆದರೆ ಅಥಣಿ ಪಟ್ಟಣದಲ್ಲಿನ ಇಂದಿರಾ ಕ್ಯಾಂಟಿನ್ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗದೆ ಇಂದು ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಆದಷ್ಟು ಸಾರ್ವಜನಿಕ ಪ್ರದೇಶದಲ್ಲಿ ನಿರ್ಮಾಣ ಮಾಡಲಿ” ಎಂದು ಹೇಳಿದ್ದಾರೆ.

“ಅಥಣಿ ಪಟ್ಟಣದಲ್ಲಿ ಸರ್ಕಾರ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಿದೆ. ಆದರೆ ಇನ್ನೂ ಪ್ರಾರಂಭವಾಗಿಲ್ಲ. ಇಂದು ಇಲ್ಲಿ ಜನ ಶೌಚಕ್ಕೆ ಬರುತ್ತಿದ್ದಾರೆ ಹಾಗೂ ಅಕ್ರಮ ಚಟುವಟಿಕೆಗಳ ತಾಣವಾಗಿದ್ದು ಸ್ಥಳೀಯ ಅಧಿಕಾರಿಗಳು ಆದಷ್ಟು ಬೇಗನೆ ಈ ಸಮಸ್ಯೆ ಪರಿಹರಿಸಬೇಕು” ಎಂದು ದಲಿತ ಸಂಘಟನೆಯ ತಾಲೂಕು ಸಂಚಾಲಕ ಪ್ರಕಾಶ್ ಕಾಂಬ್ಳೆ ಆಗ್ರಹಿಸಿದ್ದಾರೆ.

ಈ ಕುರಿತು ಅಥಣಿ ಪಟ್ಟಣದ ಪುರಸಭೆಯ ಅಧಿಕಾರಿಗಳನ್ನು ಈ ದಿ.ಕಾಮ್‌ ಸಂಪರ್ಕಿಸಿದಾಗ, “ಇಂದಿರಾ ಕ್ಯಾಂಟಿನ್ ನಿರ್ಮಾಣ ಇನ್ನೂ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ರಾಜ್ಯಮಟ್ಟದ ಟೆಂಡರ್‌ನಲ್ಲಿದೆ” ಎಂದಷ್ಟೇ ತಿಳಿಸಿದ್ದಾರೆ. ಇಂದಿರಾ ಕ್ಯಾಂಟಿನ್ ಸುತ್ತಲೂ ಸ್ವಚ್ಛತೆ ಇಲ್ಲದಿರುವ ಕುರಿತು ಪ್ರಶ್ನಿಸಿದಾಗ ಸರಿಯಾಗಿ ಪ್ರತಿಕ್ರಿಯೆ ನೀಡಿರುವುದಿಲ್ಲ.

“ನಿತ್ಯವೂ ಅಥಣಿ ಪಟ್ಟಣಕ್ಕೆ ಗ್ರಾಮೀಣ ಭಾಗದಿಂದ ಬರುವ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟಿನ್ ಸೌಲಭ್ಯ ಸಿಗದಿರುವುದು ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು, 6 ತಿಂಗಳಿನಿಂದ ಅರ್ಧಕ್ಕೆ ನಿಂತಿರುವ ಇಂದಿರಾ ಕ್ಯಾಂಟಿನ್ ಆದಷ್ಟು ಬೇಗ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X