ರಾಯಚೂರು | ಅಧಿಕಾರ ದುರ್ಬಳಕೆ; ಕೋಠಾ ಗ್ರಾಮ ಪಂಚಾಯಿತಿ ಸದಸ್ಯರ ವಿರುದ್ಧ ತನಿಖೆಗೆ ಆಗ್ರಹ

Date:

Advertisements

‌ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕೋಠಾ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ಅಕ್ರಮ ಎಸಗಿರುವವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯಿಂದ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕರಿಗೆ ಮನವಿ ಸಲ್ಲಿಸಿದರು.

“ಸದಸ್ಯರಾದ ದ್ಯಾವಮ್ಮ ಶೀಲವಂತ ಮತ್ತು ನಾಗಪ್ಪ ಅವರು ರಾಜೀವ್‌ ಗಾಂಧಿ ವಸತಿ ಯೋಜನೆಯಡಿಯಲ್ಲಿ ತಮ್ಮ ಹೆಸರಿನಲ್ಲಿ ಆಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಸದಸ್ಯರಿಂದಲೇ ಭಾರೀ ಅವ್ಯವಹಾರ ನಡೆದಿದ್ದು, ಸರ್ಕಾರದ ಹಣವನ್ನು ಲೂಟಿ ಮಾಡಿದ್ದಾರೆ” ಎಂದು ಆರೋಪಿಸಿದರು.

“ಸದರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೇದನಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ನಿಯಮಾವಳಿಗಳನ್ನು ಗಾಳಿಗೆ ತೂರಿ, ಯಾವುದೇ ಗ್ರಾಮಸಭೆಯನ್ನು ಕರೆಯದೆ ತಮ್ಮ ದಾಖಲೆಗಳನ್ನು ತಾವೇ ಸೃಷ್ಟಿಸಿಕೊಂಡು ಅಧಿಕಾರಲೋಪ ಎಸಗಿದ್ದಾರೆ” ಎಂದು ಆಗ್ರಹಿಸಿದರು.

Advertisements

“ಬಾಕಿ ಕೆಲವು ಸದಸ್ಯರು ಮನೆಗಳನ್ನು ಕಟ್ಟಿಕೊಳ್ಳದೇ ಬೇರೆ ಕಟ್ಟಡಗಳ ಮುಂದೆ ನಿಂತು ಫೋಟೋ ತೆಗೆದುಕೊಂಡು ಮನೆ ಕಟ್ಟಿರುವಂತೆ ತಿಳಿಸಿ ಹಣವನ್ನು ಲೂಟಿ ಮಾಡಿದ್ದಾರೆ. ತಾವುಗಳು ಕೂಡಲೇ ತನಿಖಾಧಿಕಾರಿಗಳನ್ನು ನೇಮಿಸಿ ತನಿಖೆ ಮಾಡಿ ತಪ್ಪಿತಸ್ಥರು ದುರುಪಯೋಗ ಮಾಡಿಕೊಂಡಿರುವ ಸರ್ಕಾರದ ಹಣವನ್ನು ವಸೂಲಿ ಮಾಡಿ ತಕ್ಷಣವೇ ಸದಸ್ಯತ್ವವನ್ನು ರದ್ದುಪಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಅಕ್ರಮ ಚಟುವಟಿಕೆ ತಾಣವಾದ ಇಂದಿರಾ ಕ್ಯಾಂಟಿನ್; ಅಧಿಕಾರಿಗಳ ನಿರ್ಲಕ್ಷ್ಯ

“ಕೋಠಾ ಗ್ರಾಮ ಪಂಚಾಯಿತಿ ಸದಸ್ಯರ ಅವ್ಯವಹಾರದಲ್ಲಿ ಶಾಮೀಲಾಗಿ, ನಿರ್ಲಕ್ಷ್ಯ ವಹಿಸಿದರೆ ಜಿಲ್ಲಾ ಕಚೇರಿ ಎದುರು ಬೃಹತ್ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಜಿಲ್ಲಾಧ್ಯಕ್ಷ ಕೊಂಡಪ್ಪ ಕೆ, ವೀರೇಶ್ ಜಲಗಾರ, ಎಂ ಎಸ್ ವೆಂಕಟೇಶ, ನರಸಿಂಹಲು ಕುರುಬದೊಡ್ಡಿ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X