ಶಿರೋಮಣಿ ಅಕಾಲಿದಳ ನಾಯಕ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ

Date:

Advertisements

ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.

ತಕ್ಷಣವೇ ಸ್ಥಳದಲ್ಲಿದ್ದ ಜನರು ಗುಂಡಿನ ದಾಳಿ ನಡೆಸಿದವನನ್ನು ತಡೆದಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುಂಡಿನ ದಾಳಿ ನಡೆಸಿದಾತ ಮಾಜಿ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ಭಯೋತ್ಪಾದಕ ನರೇನ್ ಸಿಂಗ್ ಚೌರಾ ಎಂದು ವರದಿಯಾಗಿದೆ.

Advertisements

ಇದನ್ನು ಓದಿದ್ದೀರಾ? ಪಂಜಾಬ್ ಉಪಚುನಾವಣೆ | ಶಿರೋಮಣಿ ಅಕಾಲಿದಳ ನಾಯಕ ಸೋಹನ್ ತಾಂಡಲ್ ಬಿಜೆಪಿ ಸೇರ್ಪಡೆ

ಸಿಖ್ ಸಮುದಾಯದ ನ್ಯಾಯಪೀಠ ಎಂದೇ ಪರಿಗಣಿಸಲಾಗುವ ಶ್ರೀ ಅಕಾಲ್ ತಖ್ತ್ ಸಾಹಿಬ್ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್‌ಗೆ ಅವರಿಗೆ ಧಾರ್ಮಿಕ ಶಿಕ್ಷೆಯನ್ನು ವಿಧಿಸಿದೆ.

ಅಮೃತಸರದ ಗುರುದ್ವಾರ ಸಾಹಿಬ್‌ನಲ್ಲಿ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಇತರ ಧಾರ್ಮಿಕ ಶಿಕ್ಷೆಗಳನ್ನು ಸುಖ್‌ಬೀರ್ ಸಿಂಗ್ ಅವರಿಗೆ ವಿಧಿಸಿದೆ. ಅದರಂತೆ ಸುಖ್‌ಬೀರ್ ಸಿಂಗ್ ಸದ್ಯ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಸೇವಾದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಸುಖ್‌ಬೀರ್ ಸಿಂಗ್ ಬಾದಲ್ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X