ತುರುವೇಕೆರೆ | ಅಕಾಲಿಕ ಮಳೆಗೆ ರಾಗಿ ಬೆಳೆ ಹಾನಿ : ರೈತರ ಜಮೀನುಗಳಿಗೆ ತಹಶೀಲ್ದಾರ್ ಭೇಟಿ

Date:

Advertisements

 ತುರುವೇಕೆರೆ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ರಾಗಿ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ಇದರ ವಸ್ತುಸ್ಥಿತಿಯನ್ನು ಅರಿಯಲು ತಹಶೀಲ್ದಾರ್ ಎನ್.ಎ.ಕುಂಞ ಅಹಮದ್ ಮತ್ತು ಸಹಾಯಕ ಕೃಷಿ ನಿರ್ದೇಶಕಿ ಬಿ.ಪೂಜಾ ಮಂಗಳವಾರ ದಬ್ಬೇಘಟ್ಟ ಹೋಬಳಿಯಲ್ಲಿ ವೀಕ್ಷಣೆ ನಡೆಸಿದರು.

 ದಬ್ಬೇಘಟ್ಟ ಹೋಬಳಿಯ ಸೂಳೆಕೆರೆ, ಹೆಡಗೀಹಳ್ಳಿ, ಬೇವಿನಹಳ್ಳಿ, ಅರೆಮಲ್ಲೇನಹಳ್ಳಿ, ಕ್ಯಾಮಸಂದ್ರ ಸೇರಿದಂತೆ ಹಲವಾರು ಗ್ರಾಮಗಳ ರೈತರುಗಳು ಬೆಳೆದಿರುವ ರಾಗಿ ಹೊಲಗಳಿಗೆ ಭೇಟಿ ನೀಡಿದರು.

 ಈಗಾಗಲೇ ಕಟಾವು ಮಾಡಿರುವ ರಾಗಿ ತೆನೆ ನೆನೆದಿದೆ. ಮಳೆ ಹೀಗೆ ಮುಂದುವರೆದರೆ ಹುಲ್ಲು ಮತ್ತು ರಾಗಿ ಎರಡೂ ಕಪ್ಪಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗುತ್ತದೆ. ಮೋಡ ಕವಿದ ವಾತಾವರಣವಿರುವ ಕಾರಣ ಹಸಿಯಾಗಿರುವ ರಾಗಿಯನ್ನು ಒಣಗಿಸಲು ರೈತರು ಕಷ್ಟಪಡುತ್ತಿದ್ದಾರೆ. ಕೆಲ ಭಾಗಗಳಲ್ಲಿ ಭಾರಕ್ಕೆ ತೆನೆ ನೆಲಕಚ್ಚಿದೆ. ಮಳೆ ನಿಲ್ಲದಿದ್ದರೆ ರಾಗಿ ಮೊಳಕೆಯೊಡೆಯಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದರು.

Advertisements

 ತುರುವೇಕೆರೆ ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಬಿ.ಪೂಜಾ ಮಾತನಾಡಿ ಈ ಬಾರಿ ಶೇ.7ರಷ್ಟು ರಾಗಿ ಬೆಳೆ ಬಿತ್ತನೆ ಹೆಚ್ಚಾಗಿದೆ. ಉತ್ತಮ ರಾಗಿ ಫಸಲು ಬಂದಿದೆ. ರೈತರು ಡಿ.11 ರ ತನಕ ಹವಮಾನದಲ್ಲಿ ವೈಪರೀತ್ಯ ಕಂಡು ಬರುವ ಕಾರಣ ಯಾರೂ ರಾಗಿ ಕಟಾವು ಮಾಡಬಾರದು. ಈಗಾಗಲೇ ಕಟಾವು ಮಾಡಿರುವ ರಾಗಿ ತೆನೆಯನ್ನು ಟಾರ್ಪಲ್ ನಿಂದ ಸಂರಕ್ಷಿಸಬೇಕು. ಹವಾಮಾನ ನೋಡಿಕೊಂಡು ರಾಗಿ ಕಟಾವು ಮಾಡಬೇಕು. ಒಂದು ವೇಳೆ ರಾಗಿ ಬೆಳೆಗೆ ಹಾನಿಯಾಗಿದ್ದರೆ ತಾಲ್ಲೂಕು ಕೃಷಿ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಅಧಿಕಾರಿಗಳು ಸ್ಥಳ ಪರಿಶೀಲನೆ ವೇಳೆ ಬೆಳೆಹಾನಿಯಾಗಿರುವುದು ಕಂಡುಬಂದಲ್ಲಿ ಪ್ರತಿ ಹೆಕ್ಟೇರ್‌ಗೆ 8500 ರೂಪಾಯಿಗಳ ಪರಿಹಾರದ ಹಣವನ್ನು ನೀಡಲಾಗುವುದು ಎಂದು ಹೇಳಿದರು.

 ಇದೇ ಸಂಧರ್ಭದಲ್ಲಿ ಕೃಷಿ ಎ.ಒ.ಗಿರೀಶ್, ಸಿಬ್ಬಂದಿ ನವೀನ್ ಕುಮಾರ್ ಸೇರಿದಂತೆ ಕಂದಾಯ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.

 ವರದಿ – ಎಸ್. ನಾಗಭೂಷಣ್ ತುರುವೇಕೆರೆ 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X