ತುರುವೇಕೆರೆ | ಗಾಂಜಾ ಮಾರಾಟ; 9 ಮಂದಿ ಆರೋಪಿಗಳ ಬಂಧನ

Date:

Advertisements

ಮಾದಕ ವಸ್ತುಗಳ ನಿಗ್ರಹ ಮಾಡಲು ಪಣತೊಟ್ಟಿರುವ ತುರುವೇಕೆರೆ ತಾಲೂಕು ಆಡಳಿತ ಗಾಂಜಾ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಗಾಂಜಾ ಮಾರಾಟ ಮತ್ತು ಸಂಗ್ರಹಣೆ ಮಾಡಿರುವ ಆರೋಪದಡಿ ಪಟ್ಟಣದ ಪೊಲೀಸರು ಮತ್ತು ತಾಲೂಕು ಅಬಕಾರಿ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 9 ಮಂದಿಯನ್ನು ಬಂಧಿಸಿದ್ದಾರೆ.

ತುರುವೇಕೆರೆ ಪಟ್ಟಣದ ದರ್ಶನ್, ತಿಲಕ್, ಹರ್ಷವರ್ಧನ, ಮಹಮದ್ ಖಲೀಲ್ ಮತ್ತು ತಾಲೂಕಿನ ಚಂದ್ರಮೋಹನ, ಮನು, ಪ್ರೀತಂ, ರಾಕೇಶ್(ತಿಪಟೂರು) ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆ ಗ್ರಾಮದ ನರೇಶ್ ಜಿ ಎಚ್ ಬಂಧಿತ ಆರೋಪಿಗಳಾಗಿದ್ದಾರೆ.

Advertisements

ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಬಲಿಯಾಗಬಾರದು ಮತ್ತು ತಾಲೂಕಿನಲ್ಲಿ ಗಾಂಜಾ ಮಾರಾಟ ಜಾಲವನ್ನು ಬುಡಸಮೇತ ಕಿತ್ತುಹಾಕಬೇಕೆಂಬ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎನ್ ಎ ಕುಂಞ ಅಹಮದ್ ಮತ್ತು ತುರುವೇಕೆರೆ ಸಿಪಿಐ ಲೋಹಿತ್ ಹಾಗೂ ಪಿಎಸ್‌ಐಗಳಾದ ಪಾಂಡು ಮತ್ತು ಚಿತ್ತರಂಜನ್ ಅವರ ತಂಡ ರಚಿಸಿ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಗಂಭೀರವಾಗಿ ಕ್ರಮ ತೆಗೆದುಕೊಂಡಿದ್ದಾರೆ.

ತುರುವೇಕೆರೆ ಪಟ್ಟಣವನ್ನು ಕೇಂದ್ರವನ್ನಾಗಿಸಿಕೊಂಡಿರುವ ಆರೋಪಿಗಳು ಪಕ್ಕದ ತಾಲೂಕುಗಳಿಂದ ಗಾಂಜಾ ಮಾರಾಟ ಮಾಡಲು ಬಂದು ಸಿಕ್ಕಿಬಿದ್ದಿರುವುದೇ ಹೆಚ್ಚಾಗಿದೆ. ಅವರುಗಳು ನೀಡಿರುವ ಮಾಹಿತಿಯನ್ನಾಧರಿಸಿಯೇ ತುರುವೇಕೆರೆಯ ಪೊಲೀಸ್ ತಂಡ ಬೇರೆ ಬೇರೆ ತಾಲೂಕುಗಳಲ್ಲಿ ದಾಳಿ ಮಾಡಿ ಅಲ್ಲಿನ ಆರೋಪಿಗಳನ್ನೂ ಕೂಡಾ ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕಳಪೆ ಗುಣಮಟ್ಟದ ಫರ್ನಿಚರ್ ಪೂರೈಕೆ; ಕಾರ್ಪೆಂಟರ್‌ಗೆ ₹20,000 ದಂಡ ವಿಧಿಸಿದ ನ್ಯಾಯಾಲಯ

“ಬಂಧಿತ ಆರೋಪಿಗಳಿಂದ ಸುಮಾರು 1 ಕೆಜಿಗೂ ಹೆಚ್ಚಿನ ಗಾಂಜಾ ಸೊಪ್ಪು ಮತ್ತು ಇನ್ನಿತರ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಇವರ ಹಿಂದೆ ದೊಡ್ಡ ಜಾಲವೇ ಇರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಸಾಕಷ್ಟು ಆರೋಪಿಗಳು ಸಿಗುವ ಸಾಧ್ಯತೆ ಇದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವರದಿ : ಎಸ್ ನಾಗಭೂಷಣ್ 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X