ಸಂಭಲ್‌ಗೆ ತೆರಳುವುದಕ್ಕೆ ತಡೆ | ‘ಸಾಂವಿಧಾನಿಕ ಹಕ್ಕು ನಿರಾಕರಣೆ’ ಎಂದ ರಾಹುಲ್ ಗಾಂಧಿ

Date:

Advertisements

ಸಂಭಲ್‌ಗೆ ತೆರಳುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, “ಲೋಕಸಭೆ ವಿಪಕ್ಷ ನಾಯಕನಾದ ನನ್ನ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿದೆ” ಎಂದು ದೂರಿದ್ದಾರೆ.

ಸಂಭಲ್‌ನಲ್ಲಿ ಸದ್ಯ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಹಿನ್ನೆಲೆ ರಾಹುಲ್, ಪ್ರಿಯಾಂಕಾ ಗಾಂಧಿ ಅವರನ್ನು ಗಾಜಿಪುರ ಗಡಿಯಲ್ಲಿ ಜಿಲ್ಲೆಗೆ ತೆರಳುತ್ತಿದ್ದಾಗ ತಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಹುಲ್, ಪ್ರಿಯಾಂಕಾ ಮಾತ್ರವಲ್ಲದೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಕೂಡಾ ಇಂದು ಬೆಳಿಗ್ಗೆ ಗಾಜಿಪುರ ಗಡಿಯನ್ನು ತಲುಪಿದ್ದರು. ಆದರೆ ಗಡಿಯಲ್ಲಿ ಸಂಭಲ್‌ಗೆ ಹೋಗುವವರನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಹಾಗೆಯೇ ಭಾರೀ ಪೊಲೀಸ್ ಪಡೆಯನ್ನು ಗಡಿಯಲ್ಲಿ ನಿಯೋಜಿಸಲಾಗಿದೆ.

Advertisements

ಇದನ್ನು ಓದಿದ್ದೀರಾ? ಸಂಭಲ್‌ ವಿವಾದ ಮತ್ತು ರಾಜಕೀಯ ನಾಯಕರ ದ್ವೇಷ ರಾಜಕಾರಣ

“ನಾವು ರಾಹುಲ್ ಗಾಂಧಿ ಅವರಿಗೆ ಸಂಭಲ್‌ಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಅಲ್ಲಿ ನಿಷೇದಾಜ್ಞೆಯನ್ನು ಹೊರಡಿಸಲಾಗಿದೆ. ಪೊಲೀಸರು ರಾಹುಲ್ ಗಾಂಧಿ ಅವರನ್ನು ಗಡಿಯಲ್ಲಿಯೇ ತಡೆಯುತ್ತಾರೆ” ಎಂದು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಒಬ್ಬನೇ ಹೋಗಲು ಸಿದ್ಧ: ರಾಹುಲ್ ಗಾಂಧಿ

ಇನ್ನು ತಮ್ಮನ್ನು ಪೊಲೀಸರು ತಡೆ ಹಿಡಿದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, “ನಾವು ಸಂಭಲ್‌ಗೆ ಹೋಗುವ ಪ್ರಯತ್ನ ಮಾಡಿದೆವು. ಆದರೆ ನಮ್ಮನ್ನು ತಡೆಯಲಾಗಿದೆ. ಲೋಕಸಭೆಯ ವಿಪಕ್ಷ ನಾಯಕನಾಗಿ ಸಂಭಲ್‌ಗೆ ಭೇಟಿ ನೀಡುವುದು ನನ್ನ ಹಕ್ಕು. ಪೊಲೀಸರ ಜೊತೆ ನಾನು ಒಬ್ಬನೇ ಸಂಭಲ್‌ಗೆ ಹೋಗಲು ಸಿದ್ಧನಿದ್ದೇನೆ. ಆದರೆ ಅದಕ್ಕೂ ಅವಕಾಶ ನೀಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

“ಇದು ‘ಹೊಸ ಹಿಂದೂಸ್ತಾನ’ ಆಗಿದೆ. ಡಾ. ಬಿ ಆರ್ ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನದ ಅಂತ್ಯಕ್ಕೆ ಯತ್ನ ನಡೆಯುತ್ತಿದೆ. ನನ್ನ ಸಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಆದರೆ ನಾವು ಈ ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ತಿಳಿಸಿದರು.

ಉತ್ತರ ಪ್ರದೇಶದ ಸಂಭಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು ಭದ್ರತಾ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿದೆ.

ಈ ಹಿಂದೆ ನವೆಂಬರ್ 30ರವರೆಗೆ ನಿರ್ಬಂಧವನ್ನು ಹೇರಲಾಗಿತ್ತು. ಆದರೆ ಬಳಿಕ ನಿರ್ಬಂಧವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X