ಚಿಕ್ಕಮಗಳೂರು | ಹಿಂದುತ್ವವಾದಿ ಶೋಭಾಯಾತ್ರೆ; ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗಿಲ್ಲ ಪ್ರವೇಶ

Date:

Advertisements

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಸೌಹಾರ್ದತಾಣ ಬಾಬಾಬುಡನ್‌ಗಿರಿ ದರ್ಗಾಯನ್ನು ದತ್ತಪೀಠ ಮಾಡಬೇಕು. ಹಿಂದುಪೀಠವಾಗಿ ಬದಲಿಸಬೇಕೆಂದು ಆಗ್ರಹಿಸಿ ಭಜರಂಗದಳ ಮತ್ತು ವಿಶ್ವ ಹಿಂದು ಪರಿಷತ್‌ ದತ್ತ ಜಯಂತಿ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರಗಳ ವಾರಾಂತ್ಯದಲ್ಲಿ ಚಂದ್ರದ್ರೋಣ ಪರ್ವತದಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಡಿಸೆಂಬರ್ 6ರಿಂದ ಡಿಸೆಂಬರ್ 15ರ ನಡುವಿನ ಎರಡು (ಶನಿವಾರ+ಭಾನುವಾರ) ವಾರಾಂತ್ಯಗಳಲ್ಲಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಗಾಳಿಕೆರೆ, ಬಾಬಾಬುಡನ್​ ಗಿರಿ ದರ್ಗಾಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಿ ಜಿಲ್ಲಾಡಳಿತದ ಆದೇಶಿಸಿದೆ.

ಬಾಬಾಬುಡನ್‌ಗಿರಿಯಲ್ಲಿ 25 ವರ್ಷಗಳಿಂದ ವಿವಾದದ ತಾಣವಾಗಿಸಿರುವ ಬಜರಂಗದಳ ಮತ್ತು ವಿಎಚ್‌ಪಿ ಡಿಸೆಂಬರ್ 6ರಿಂದ 14ರವರೆಗೆ 25ನೇ ವರ್ಷದ ದತ್ತಜಯಂತಿ ನಡೆಸುತ್ತಿವೆ. ಡಿಸೆಂಬರ್ 6ರಂದು ದತ್ತಮಾಲಾ ಧಾರಣೆ ನಡೆಯಲಿದ್ದು, ನಂತರದ ದಿನಗಳಲ್ಲಿ ಚಿಕ್ಕಮಗಳೂರಿನಲ್ಲಿ ಶೋಭಾಯಾತ್ರೆ ನಡೆಯಲಿದೆ. ಬಾಬಾಬುಡನ್‌ಗಿರಿಯಾಗಿ ಹಿಂದುತ್ವದ ಕೋಮುವಾದಿ ತಾಣವಾಗಿಸಲು ಬಾಬಾಬುಡನ್‌ಗಿರಿಯಲ್ಲಿ ಹೋಮವನ್ನೂ ನಡೆಸಲು ಮುಂದಾಗಿವೆ. ಕೋಮುವಾದಿ ಕಾರ್ಯಕರ್ತರು ಕೋಮುವಾದಿ ಘೋಷಣೆಗಳು, ದ್ವೇಷ ಭಾಷಣಗಳನ್ನು ಮಾಡುವ ಸಾಧ್ಯತೆ ಇದೆ.

Advertisements

ಯಾವುದೇ ಅಹಿತರಕರ ಘಟನೆಗಳು ನಡೆಯದಂತೆ ಜಿಲ್ಲೆಯ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ, ಮುಂದಿನ ಎರಡು ವಾರಗಳ ವಾರಾಂತ್ಯದಲ್ಲಿ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X