ಹಾಸನ l ಕಾಂಗ್ರೆಸ್‌ ಸ್ವಾಭಿಮಾನಿ ಸಮಾವೇಶ ಖಂಡಿಸುತ್ತೇವೆ: ಶಾಸಕ ಎಚ್ ಪಿ ಸ್ವರೂಪ್

Date:

Advertisements

ಹಾಸನ ನಗರದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್‌ ಸರ್ಕಾರದಿಂದ ಸ್ವಾಭಿಮಾನಿ ಸಮಾವೇಶ ನಡೆಸುತ್ತಿರುವುದನ್ನು ಖಂಡಿಸುತ್ತೇವೆ ಎಂದು ಹಾಸನದ ಜೆಡಿಎಸ್ ಶಾಸಕ ಎಚ್ ಪಿ ಸ್ವರೂಪ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾ‌ರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದರೂ ಕೂಡ ನಮ್ಮ ಸರ್ಕಾರದಲ್ಲಿ ಜನಕಲ್ಯಾಣ ಮಾಡಿದ್ದೇವದು ಸುಳ್ಳು ಹೇಳಿಕೊಂಡು ಹಾಸನದಲ್ಲಿ ಮಾಡುತ್ತಿರುವ ಸ್ವಾಭಿಮಾನಿ ಸಮಾವೇಶವನ್ನು ಜೆಡಿಎಸ್‌ ಪಕ್ಷದಿಂದ ಖಂಡಿಸುತ್ತೇವೆ” ಎಂದರು.

ಇದನ್ನೂ ಓದಿದ್ದೀರಾ?ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು

Advertisements

“ಮೂರು ಉಪಚುನಾವಣೆ ಗೆದ್ದಿದ್ದೇವೆ. ಮಂಡ್ಯದಲ್ಲಿ ಒಬ್ಬರೂ ಮಾತ್ರ ಜೆಡಿಎಸ್‌ ಶಾಸಕರು ಬಿಟ್ಟರೆ ಉಳಿದ ಎಲ್ಲರೂ ಕಾಂಗ್ರೆಸ್ ಶಾಸಕರೇ ಇದ್ದೇವೆ. ಹಳೆ ಮೈಸೂರಿನಲ್ಲಿಯೂ ಕೂಡ ಕಾಂಗ್ರೆಸ್‌ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದೇವೆ. ಹಾಸನದಲ್ಲಿ ಒಬ್ಬರು ಕಾಂಗ್ರೆಸ್ ಶಾಸಕರು ಮತ್ತು ಸಂಸದರು ಇದ್ದು, ಶಕ್ತಿ ತುಂಬುವ ನಿಟ್ಟಿನಲ್ಲಿ ಇಲ್ಲೇ ಕಾಂಗ್ರೆಸ್‌ ಸಮಾವೇಶ ಮಾಡುತ್ತಿದ್ದೇವೆಂದು ಕಾಂಗ್ರೆಸ್‌ ಹೇಳಿಕೊಂಡಿರುವುದು ಹಾಸ್ಯಸ್ಪದ ಹೇಳಿಕೆಯಾಗಿದೆ” ಎಂದರು.

“ಹಾಸನ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದಾರೆಯೇ? ಇದರ ಕುರಿತು ಡಿಸೆಂಬ‌ರ್ 5ರ ಸಮಾವೇಶದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಉತ್ತರ ಹೇಳಬೇಕು” ಎಂದು ಶಾಸಕ ಎಚ್ ಪಿ ಸ್ವರೂಪ್ ಸವಾಲು ಹಾಕಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X