ಮಳವಳ್ಳಿ | ಕನ್ನಡ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘ ಸದಾ ಸಕ್ರಿಯ: ಯೋಗಣ್ಣ

Date:

Advertisements

ಕನ್ನಡದ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘವು ಸದಾ ಸಕ್ರಿಯವಾಗಿದೆ. ಕಾರಣಾಂತರಗಳಿಂದ ಕೆಲ ದಿನಗಳಿಂದ ಸಂಘಟನೆ ಸಕ್ರಿಯವಾಗಿರಲಿಲ್ಲ. ನಮ್ಮ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸಂಘಟನೆ ಪುನಃ ಸಕ್ರಿಯವಾಗಿ ಕನ್ನಡ ನಾಡು, ನುಡಿಗಾಗಿ ತೊಡಗಿಸಿಕೊಳ್ಳಲಿದೆ ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಯ ಕರ್ನಾಟಕ ಸಂಘಟನೆಯ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

“ಸುಭಾಷ್ ಚಂದ್ರ ಬೋಸ್ ಜಯಂತಿ ದಿನದಂದು ಹೆಚ್ಚಿನ ಜನಸಂಖ್ಯೆಯಲ್ಲಿ ಸಾರ್ವಜನಿಕರು ಬಂದು ರಕ್ತದಾನ ಶಿಬಿರಕ್ಕೆ ಪಾಲ್ಗೊಳ್ಳಬೇಕು” ಎಂದು ಜಿಲ್ಲಾಧ್ಯಕ್ಷ ಯೋಗಣ್ಣ ಮನವಿ ಮಾಡಿದರು.

Advertisements

ಇದನ್ನು ಓದಿದ್ದೀರಾ? ಮಂಡ್ಯ | ಇ-ಖಾತಾ ಆಂದೋಲನಕ್ಕೆ ಚಾಲನೆ; ಸದುಪಯೋಗ ಪಡೆದುಕೊಳ್ಳಲು ನಗರಸಭೆ ಅಧ್ಯಕ್ಷ ಕರೆ

ಜಿಲ್ಲಾ ಉಪಾಧ್ಯಕ್ಷರಾಗಿ ರಮೇಶ್, ತಾಲೂಕು ಅಧ್ಯಕ್ಷರಾಗಿ ಹರ್ಷಿತ್, ಉಪಾಧ್ಯಕ್ಷರಾಗಿ ಅಭಿಷೇಕ್, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ಆಯ್ಕೆ ಮಾಡಿ ಪ್ರಮಾಣ ಪತ್ರವನ್ನು ವಿತರಿಸಿದರು.

ನೂತನ ಜಿಲ್ಲಾ ಉಪಾಧ್ಯಕ್ಷ ರಮೇಶ್ ಮಾತನಾಡಿ, “ಕನ್ನಡದ ನಾಡು ನುಡಿ ವಿಷಯ ಬಂದಾಗ ಜಯ ಕರ್ನಾಟಕ ಸಂಘಟನೆ ಮುಂಚೂಣಿಯಲ್ಲಿರುತ್ತದೆ. ಅಲ್ಲದೆ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ನಿರಂತರ ಹೋರಾಟ ಮಾಡಿಕೊಂಡು ಬಂದಿದೆ. ಯುವಕರು ಸಂಘಟನೆಗೆ ಸೇರುವ ಮೂಲಕ ಶಕ್ತಿ ತುಂಬಬೇಕಾಗಿದೆ” ಎಂದರು.

ಇದನ್ನು ನೋಡಿದ್ದೀರಾ? ಮಂಡ್ಯ | ಕನ್ನಂಬಾಡಿ ಕಟ್ಟಿದ ತಮಿಳರ ಎತ್ತಂಗಡಿ?

ನೂತನವಾಗಿ ಆಯ್ಕೆಯಾದ ತಾಲೂಕು ಅಧ್ಯಕ್ಷ ಹರ್ಷಿತ್ ಮಾತನಾಡಿ, “ಜಿಲ್ಲಾಧ್ಯಕ್ಷರ ಸಲಹೆ ಮೇರೆಗೆ ತಾಲೂಕಿನಲ್ಲಿ ಜಯ ಕರ್ನಾಟಕ ಸಂಘಟನೆಯನ್ನು ಸಕ್ರಿಯವಾಗಿ ಮಾಡಿ, ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತಿ ಮಾಡುತ್ತೇನೆ” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿ, ತಾಲೂಕು ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X