ಇ.ಡಿ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು: ಸಿಎಂ ಸಿದ್ದರಾಮಯ್ಯ ಆರೋಪ

Date:

Advertisements

ಹೈಕೋರ್ಟ್‌ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ಇ.ಡಿ ಅವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, “ಇ.ಡಿ ಅವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ” ಎಂದರು.

“ಈ ವಿಚಾರಕ್ಕೆ ಸಂಬಂಧಪಟ್ಟಂತೆನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ” ಎಂದು ತಿಳಿಸಿದರು.

Advertisements

“ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಇ.ಡಿ ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ” ಎಂದರು.

ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X