ಬಾಗೇಪಲ್ಲಿ | ಚೌಡೇಶ್ವರಿಯ ದೇವಾಲಯದಲ್ಲಿ ವಸ್ತ್ರಾಭರಣ, ವಿಗ್ರಹಗಳ ಕಳವು

Date:

Advertisements

ದೇವಾಲಯದ ಬೀಗ ಮುರಿದು ದೇವರ ಪಂಚಲೋಹದ ವಿಗ್ರಹಗಳು ಹಾಗೂ ವಸ್ತ್ರಾಭರಣಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬಾಗೇಪಲ್ಲಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ನಡೆದಿದೆ.

ತಾಲೂಕಿನ ಕಸಬಾ ಹೋಬಳಿ ಲಘು ಮದ್ದೇಪಲ್ಲಿ ಗ್ರಾಮದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಘಟನೆ ನಡೆದಿದೆ. ದೇವಾಲಯದ ಪೂಜಾರಿ ವೆಂಕಟರವಣಪ್ಪ ಎಂದಿನಂತೆ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲು ತೆರಳಿದಾಗ ಕಳ್ಳತನದ ಮಾಹಿತಿ ಬಹಿರಂಗವಾಗಿದೆ.

ಕಳವು

ಕಳ್ಳರು ದೇವಾಲಯದ ಬಾಗಿಲಿನ ಬೀಗವನ್ನು ಮುರಿದು ದೇವಾಲಯದಲ್ಲಿದ್ದ ದೇವಿಯ ಪಂಚಲೋಹ ವಿಗ್ರಹ, ಶಕ್ತಿ ದೇವತೆಯ 2 ವಿಗ್ರಹಗಳು, 2 ಪ್ರಭಾವಳಿಗಳು, ದೇವಿಯ ಸೀರೆ ಮತ್ತು ರವಿಕೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ.

Advertisements

ಆದರೆ 2 ತಾಳಿ ಮತ್ತು 2 ನಾಗರ ಹೆಡೆಗಳನ್ನು ಮಾತ್ರ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬೆಳಗ್ಗೆ ಬಾಗಿಲು ತೆರೆಯಲು ಬಂದ ಪೂಜಾರಿ ಗಾಬರಿಗೊಂಡಿದ್ದು, ಕೂಡಲೇ ಗ್ರಾಮಸ್ಥರು ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬಾಗೇಪಲ್ಲಿ | ವಕೀಲ ವೃತ್ತಿ ಜಗತ್ತಿನಲ್ಲಿಯೇ ಶ್ರೇಷ್ಠ ವೃತ್ತಿ; ನ್ಯಾಯಾಧೀಶೆ ಎಂ.ಭಾರತಿ

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಆರ್. ವರ್ಣಿ ಅವರ ನೇತೃತ್ವದಲ್ಲಿ ಪಿಎಸ್ ಐ ನಾಗಮ್ಮ ಮತ್ತು ಸಿಬ್ಬಂದಿ, ಶ್ವಾನದಳ ಮತ್ತು ಬೆರಳಚ್ಚು ತಂಡಗಳನ್ನು ಕರೆಸಿ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X