ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳ; ಆರು ತಿಂಗಳ ಕಾಲಾವಕಾಶ ನೀಡುವಂತೆ ಪ್ರತಿಭಟನೆ

Date:

Advertisements

ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಹಿಳೆಯರ ಮೇಲೆ ಮಾನಸಿಕ ದೌರ್ಜನ್ಯ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್, ಸಂಘ ಸಂಸ್ಥೆಗಳಿಂದ ಹಾಗೂ ಇನ್ನಿತರ ಫೈನಾನ್ಸ್ ಕಂಪನಿಗಳಿಂದ ತೆಗೆದುಕೊಂಡ ಹಣವನ್ನು ವಾಪಸ್‌ ಮರುಪಾವತಿಸಲು ಬಡ್ಡಿ ರಹಿತ ಮರುಪಾವತಿ ಹಾಗೂ ಆರು ತಿಂಗಳ ಕಾಲಾವಕಾಶ ಕಲ್ಪಿಸಲು ಒತ್ತಾಯಿಸಿ ಸಾರ್ವಜನಿಕ ಹೋರಾಟಗಾರರು ಮತ್ತು ಸಮಾಜ ಸೇವಕರ ವೇದಿಕೆಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ತೆರಳಿ ಸಾಲ ಮರುಪಾವತಿಗೆ ಆರು ತಿಂಗಳ ಸಮಯಾವಕಾಶ ಕೊಡಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.

“ಪ್ರಸ್ತುತ ಮನೆಗಳಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು, ದುರ್ಘಟನೆಗಳು ನಡೆದಿರುತ್ತವೆ. ಇಂತಹ ಸಂದರ್ಭದಲ್ಲಿಯೂ ಪೈನಾನ್ಸ್‌ಗಳಿಂದ ನಿತ್ಯವೂ ಕಿರುಕುಳ ಹೆಚ್ಚಾಗುತ್ತಿದೆ. ಸಾಲ ವಾಪಸ್ ನೀಡುವುದಿಲ್ಲವೆಂದು ಹೇಳುವುದಿಲ್ಲ. ಸ್ವಲ್ಪ ಕಾಲಾವಕಾಶ ಕೊಡಬೇಕು” ಎಂದು ಒತ್ತಾಯಿಸಿದರು.

Advertisements

“ಮೈಕ್ರೋ ಫೈನಾನ್ಸ್, ಎನ್‌ಜಿಒಗಳು ಹಾಗೂ ಸಂಘ ಸಂಸ್ಥೆಗಳಿಂದ 15 ದಿನಗಳಿಗೊಮ್ಮೆ, ತಿಂಗಳಿಗೊಮ್ಮೆ ವಾರ, ಮಾಸಿಕ ಕಂತು ಪ್ರಕಾರ ಮರುಪಾವತಿ ನೀಡಲು ಸಾಲ ಪಡೆದುಕೊಂಡಿದ್ದೆವು. ಆದರೆ ಈಗಿನ ಪರಿಸ್ಥಿತಿಯಲ್ಲಿ ಕಟ್ಟಲು ಅಡೆತಡೆಗಳು ಸಂಭವಿಸುತ್ತಿವೆ. ನಮ್ಮ ವ್ಯಾಪಾರಗಳು ನಡೆಯದೆ ವಾಪಸ್‌ ನೀಡುವ ಪರಿಸ್ಥಿತಿಯಿಲ್ಲದೆ ಪರದಾಡುತ್ತಿದ್ದೇವೆ. ಹೀಗಿರುವಾಗ ಫೈನಾನ್ಸ್ ಕಂಪನಿಗಳ ಸಿಬ್ಬಂದಿಗಳು ಬೆಳಿಗ್ಗೆಯಾದರೆ ಸಾಕು, ಮನೆಯ ಮುಂದೆ ಗಂಟೆ ಗಟ್ಟಲೆ ಕೂಗಾಡುವುದು, ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಅಥವಾ ಮನೆಯಂಗಳದಲ್ಲಿ, ಓಣಿಯಲ್ಲಿ ನಿಂತು ನಮ್ಮ ಮರ್ಯಾದೆಗೆ ಧಕ್ಕೆಯುಂಟು ಮಾಡುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು.

“ಮನೆಯ ಮುಂದೆ ಏಜೆಂಟರು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ದುಡ್ಡು ಇಲ್ಲವೆಂದರೆ, ನಿಮ್ಮ ಕಿಡ್ನಿ ಮಾರಾಟ ಮಾಡಿ, ಇಲ್ಲವಾದರೆ ಮನೆಯಲ್ಲಿರುವ ವಸ್ತುಗಳನ್ನು ಮಾರಾಟ ಮಾಡಿ ಹಣ ನಮಗೆ ನೀಡಿ. ಇಲ್ಲವಾದರೆ ರೈಲು ಹಳಿಗೆ ಬಿದ್ದು ಸಾಯಿರಿ. ಇಲ್ಲವಾದಲ್ಲಿ ನಾವುಗಳು ಮನೆಯಿಂದ ಹೋಗುವುದಿಲ್ಲ ಮತ್ತು ನಮ್ಮ ಕಂಪನಿಗಳಿಂದ ದಿನಕ್ಕೆ 100 ಸಲ ಕರೆ ಮಾಡಿ ಹಿಂಸೆ ನೀಡುತ್ತೇವೆಂದು ಬೆದರಿಸುತ್ತಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಹಾಸನದಲ್ಲಿ ದೇವೇಗೌಡರ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ; ಸಭಿಕರಿಂದ ಚಪ್ಪಾಳೆಯ ಸುರಿಮಳೆ

“ಫೈನಾನ್ಸ್ ಕಂಪನಿಗಳಿಂದ ಜೀವನಕ್ಕೆ ಅನಾಹುತವಾಗುವ ಸಂಭವ ಉದ್ಭವಿಸಿದೆ. ಸಾಲ ವಾಪಸ್ ನೀಡುವುದಿಲ್ಲವೆಂದು ಹೇಳುವುದಿಲ್ಲ.

ಪ್ರತಿಭಟನೆಯಲ್ಲಿ ಅಂಬಾಜಿರಾವ್ ಮೈದರಕರ್, ಅಹ್ಮದ್ ಬೇಗ್, ಮಸೂದ್ ಅಲಿ ಸೇರಿದಂತೆ ಸಾಲ ಪಡೆದ ನೂರಾರು ಮಹಿಳೆಯರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X