ವಿಜಯಪುರ | ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದಲ್ಲಿ ವಿಶ್ವ ಮಣ್ಣು ದಿನಾಚಾರಣೆ

Date:

Advertisements

ವಿಜಯಪುರ ಜಿಲ್ಲೆ ಫಲವತ್ತಾದ ಭೂಮಿಗೆ ಹೆಸರುವಾಸಿಯಾದ ಜಿಲ್ಲೆ. ಈ ಜಿಲ್ಲೆ ಈಗ ಸಮಗ್ರ ನೀರಾವರಿಗೆ ಒಳಪಟ್ಟಿದೆ. ಡೋಣಿ ಪಾತ್ರದ ರೈತರ ಜಮೀನು ಸವಳು-ಜವಳಾಗುತ್ತಿದೆ ಎಂದು ಧಾರವಾಡ ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯೆ ಪಾರ್ವತಿ ಕುರ್ಲೆ ವಿಷಾದಿಸಿದರು.

ವಿಜಯಪುರ ನಗರದ ಹೊರಹೊಲಯದ ಹಿಟ್ನಳ್ಳಿಯ ಕೃಷಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಣ್ಣು ದಿನಾಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಫಲವತ್ತಾದ ಮಣ್ಣಿನ ಸಂರಕ್ಷಣೆ ಮತ್ತು ಮಣ್ಣಿನ ಸವಕಳಿಯನ್ನು ಸಂರಕ್ಷಿಸುವತ್ತ ಚಿಂತನೆ ಮಾಡಬೇಕಾಗಿದೆ. ಈ ಕುರಿತು ವಿಜ್ಞಾನಿಗಳು ಇಲಾಖಾ ಅಧಿಕಾರಿಗಳು ಸೂಕ್ತ ಮಣ್ಣು ಮತ್ತು ನೀರು ಸಂರಕ್ಷಣೆ ಕ್ರಮಗಳನ್ನು ಆಳವಡಿಸಿಕೊಳ್ಳಲು ರೈತರಿಗೆ ಅರಿವು ಮೂಡಿಸಬೇಕು” ಎಂದು ಹೇಳಿದರು.

Advertisements

ಕಾರ್ಯಕ್ರಮದ ಮುಖ್ಯ ಅತಿಥಿ, ಮಣ್ಣು ಉಳಿಸಿ ಆಂದೋಲನ ರುವಾರಿ ಬಸವರಾಜ ಬಿರಾದಾರ ಮಾತನಾಡಿ, “ಪಂಚಭೂತಗಳಲ್ಲಿ ಒಂದಾಗಿರುವ ಮಣ್ಣು ಜೀವಸಂಕುಲಕ್ಕೆ ಉಚಿತವಾಗಿ ಸಿಕ್ಕಿರುವ ಬೆಲೆ ಕಟ್ಟಲಾಗದ ಸಂಪತ್ತು. ಮಾನವನ ಅತ್ಯವಶ್ಯಕಗಳಾದ ಆಹಾರ, ಬಟ್ಟೆ ಮತ್ತು ವಸತಿಗಳನ್ನು ಉತ್ಪಾದಿಸಲು ಮಣ್ಣು ಮೂಲಾಧಾರ. ಕಾರಣ ಮಣ್ಣು ಜೀವನದ ಕಣ್ಣು, ಪ್ರಕೃತಿಯ ಜೀವಾಳ. ಇದನ್ನು ರಕ್ಷಿಸಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ” ಎಂದರು.

ಅತಿಥಿಯಾಗಿ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಮಾತನಾಡಿ, “ಮಣ್ಣಿನ ಸಂರಕ್ಷಣೆ ಹಾಗೂ ಸಮರ್ಪಕ ನಿರ್ವಹಣೆ ಅತ್ಯವಶ್ಯ ಹಾಗೂ ಅನಿವಾರ್ಯ. ಆದ್ದರಿಂದ ಇವುಗಳನ್ನು ವೈಜ್ಞಾನಿಕವಾಗಿ ನಿರ್ವಹಿಸಿ, ಅದರ ಉತ್ಪಾದನಾ ಸಾಮರ್ಥ್ಯವನ್ನು ಅತ್ಯುನ್ನತ ಮಟ್ಟದಲ್ಲಿ ಕಾಪಾಡಿ, ಮುಂದಿನ ಪೀಳಿಗೆಗೆ ಕೊಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಮಣ್ಣಿನ ಗುಣಮಟ್ಟ, ಆರೋಗ್ಯ ಕೃಷಿ ಮತ್ತು ಪರಿಸರ ಸಂರಕ್ಷಣೆಯ ಮೂಲಾಧಾರವಾಗಿದೆ. ಆದ್ದರಿಂದ ಮಣ್ಣನ್ನು ಫಲವತ್ತಾಗಿಡಲು ಹಾಗೂ ಅದರ ಉತ್ಪಾದಕತೆಯನ್ನು ಕಾಪಾಡಲು ಮಣ್ಣಿನ ಮೌಲ್ಯಮಾಪನ, ಮೇಲ್ವಿಚಾರಣೆ ಮತ್ತು ನಿರ್ವಹಣೆ ಅತ್ಯಗತ್ಯವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗುಡಿಬಂಡೆ | ನಿವೇಶನ ಹಂಚಿಕೆಗೆ ಅಧಿಕಾರಿಗಳ ನಿರ್ಲಕ್ಷ್ಯ; ಕಡೇಹಳ್ಳಿ ಗ್ರಾಮ ದಲಿತರ ಪ್ರತಿಭಟನೆ

ವಿಶ್ವ ಮಣ್ಣು ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಎನ್ ಡಿ ಸುನೀತಾ, ಡಾ. ಎಸ್ ಹೆಚ್ ಗುತ್ತರಗಿ, ಡಾ. ಮಹಾಂತೇಶ ತೆಗ್ಗಿ, ಡಾ. ಸಿದ್ದರಾಮ ಪಾಟೀಲ, ಡಾ. ಕಿರಣಕುಮಾರ, ಡಾ. ಸುದೀಪಕುಮಾರ, ಕೆ ಎನ್ ನದಾಫ್ ಸೇರಿದಂತೆ ಕೃಷಿ ಕಾಲೇಜಿನ ಸಮಸ್ತ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X