‘ಮೋದಿ-ಅದಾನಿ ಭಾಯಿ ಭಾಯಿ’; ಕಪ್ಪು ಮಾಸ್ಕ್‌ ಧರಿಸಿ ವಿಪಕ್ಷಗಳ ಸಂಸದರ ಪ್ರತಿಭಟನೆ

Date:

Advertisements

‘ಮೋದಿ-ಅದಾನಿ ಭಾಯಿ ಭಾಯಿ..’, ‘ಮೋದಿ ಅದಾನಿ ಏಕ್ ಹೈ’, ‘ಅದಾನಿ ಸೇಫ್ ಹೈ’ ಎಂಬ ಸ್ಟಿಕ್ಕರ್‌ಗಳು ಇರುವ ಕಪ್ಪು ಮಾಸ್ಕ್‌ ಮತ್ತು ಜಾಕೆಟ್‌ಗಳನ್ನು ಧರಿಸಿ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸಂಸದರು ಶುಕ್ರವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳ ಸಂಸದರು ಸಂವಿಧಾನದ ಪ್ರತಿ ಹಿಡಿದು ಸಂಸತ್‌ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಮೋದಿ ಅವರ ಅತ್ಯಾಪ್ತ, ಅಮೆರಿಕದಲ್ಲಿ ವಂಚನೆ ಪ್ರಕರಣದ ಆರೋಪ ಎದುರಿಸುತ್ತಿರುವ ಗೌತಮ್ ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

“ಅದಾನಿ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಹೆದರುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

Advertisements

‘ಇಂಡಿಯಾ’ ಮೈತ್ರಿಕೂಟದ ಪ್ರತಿಭಟನೆಯಿಂದ ಟಿಎಂಸಿ ಮತ್ತು ಎಸ್‌ಪಿ ದೂರ ಉಳಿದಿವೆ. ಇದನ್ನೇ ಮುನ್ನೆಲೆಗೆ ತಂದಿರುವ ಆಡಳಿತಾರೂಢ ಬಿಜೆಪಿ, ವಿಪಕ್ಷಗಳ ವಿಭಜನೆ ಎಂದು ಹೇಳಲಾರಂಭಿಸಿದೆ.

ಅಮೆರಿಕದ ನ್ಯೂಯಾರ್ಕ್‌ ನ್ಯಾಯಾಲಯದಲ್ಲಿ ಅದಾನಿ ಮತ್ತು ಇತರ ಏಳು ಮಂದಿಯ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಭಾರತದಲ್ಲಿ ವಿದ್ಯುತ್‌ ಒಪ್ಪಂದಗಳನ್ನು ಪಡೆದುಕೊಳ್ಳಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅದಾನಿ 2,029 ಕೋಟಿ ರೂ. ಲಂಚ ಕೊಟ್ಟಿದ್ದಾರೆ. ಅದಕ್ಕಾಗಿ, ಹಣ ಸಂಗ್ರಹಿಸಲು ಅಮೆರಿಕ ಉದ್ಯಮಿಗಳಿಗೆ ಸುಳ್ಳು ಹೇಳಿ ಹಣ ಪಡೆದುಕೊಂಡಿದ್ದಾರೆ. ಉದ್ಯಮಿಗಳಿಗೆ ಅದಾನಿ ವಂಚಿಸಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಆರೋಪಿಸಲಾಗಿದೆ.

ಈ ವರದಿ ಓದಿದ್ದೀರಾ?: ಏನಿದು ಅದಾನಿ ಲಂಚದ ಹಗರಣ: ಇಲ್ಲಿದೆ ಸಂಪೂರ್ಣ ಮಾಹಿತಿ

ಚಾರ್ಜ್‌ಶೀಟ್‌ ಸಲ್ಲಿಕೆಯಾದ ಬಳಿಕ, ಅದಾನಿಯ ಬಂಧನಕ್ಕೆ ವಾರೆಂಟ್‌ಅನ್ನೂ ಹೊರಡಿಸಲಾಗಿದೆ. ಆದರೆ, ಅದಾನಿಯನ್ನು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ಭ್ರಷ್ಟಾಚಾರ ಮತ್ತು ಮೋದಿ-ಅದಾನಿ ನಡುವಿನ ಸ್ನೇಹ ಸಂಬಂಧದ ಬಗ್ಗೆ ಸಂಸತ್‌ನಲ್ಲಿ ಚರ್ಚೆ ಮಾಡಲು ವಿಪಕ್ಷಗಳು ಆಗ್ರಹಿಸಿವೆ. ಆದರೆ, ಸರ್ಕಾರ ಚರ್ಚೆಗೆ ಅವಕಾಶ ಕೊಡುತ್ತಿಲ್ಲ. ಹೀಗಾಗಿ, ಶುಕ್ರವಾರ ವಿಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X