ರಾಯಚೂರು | ಜಾತಿ ತಾರತಮ್ಯ ಹೋಗಲಾಡಿಸಲು ಸಂಘಟಿತರಾಗಬೇಕು: ಡಿ ಎಸ್ ಶರಣಬಸವ

Date:

Advertisements

ದೇಶದಲ್ಲಿ ಇಂದಿಗೂ ಸಮಾಜದಲ್ಲಿ ಅಸಮಾನತೆ ಮುಂದುವರೆದಿದ್ದು, ದಲಿತರ ಮೇಲೆ ದೌರ್ಜನ್ಯ, ಜಾತಿ ತಾರತಮ್ಯ, ಅಸ್ಪೃಶ್ಯ ಆಚರಣೆಗಳು ಜೀವಂತವಾಗಿವೆ. ಇವುಗಳ ನಿರ್ವಹಣೆಗೆ ಸಂಂಘಟಿತರಾಗುವುದು ಅವಶ್ಯವಾಗಿದೆ ಎಂದು ಸಿಐಟಿಯು ರಾಯಚೂರು ಜಿಲ್ಲಾ ಕಾರ್ಯದರ್ಶಿ ಡಿ ಎಸ್ ಶರಣಬಸವ ಕರೆ ನೀಡಿದರು.

ರಾಯಚೂರು ನಗರದ ದಲಿತ ಹಕ್ಕುಗಳ ಸಮಿತಿ ಕಚೇರಿಯಲ್ಲಿ ಆಯೋಜಿಸಿದ್ದ ಬಿ ಆರ್‌ ಅಂಬೇಡ್ಕರ್ ಅವರ 68ನೇ ಮಹಾ ಪರಿನಿಬ್ಬಾಣ ದಿನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

“ಸಮಾಜದಲ್ಲಿ ದಲಿತರ ಮೇಲೆ ನಿತ್ಯ ನಡೆಯುತ್ತಿರುವ ಹಲ್ಲೆ, ಕೊಲೆ, ದೌರ್ಜನ್ಯಗಳನ್ನು ತಡೆಯುವುದಕ್ಕೆ ಎಲ್ಲರೂ ಒಗ್ಗಟ್ಟಾಗಿ ಹೋರಾಡುವ ಸಂದರ್ಭ ಬಂದಿದೆ. ಜತೆಗೆ ಅಂಬೇಡ್ಕರ್ ಅವರ ಆಶಯಗಳನ್ನು ಎತ್ತಿಹಿಡಿಯಬೇಕಾಗಿದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯನಗರ | ಪ್ರಸ್ತುತದಲ್ಲಿ ಅಂಬೇಡ್ಕರ್ ತತ್ವ ಅವಶ್ಯ: ಬಸವರಾಜ ಸೂಳಿಬಾವಿ

ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಎರಡು ನಿಮಿಷ ಮೌನಾಚರಣೆ ಮಾಡಿದರು.

ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕಿ ಹೆಚ್ ಪದ್ಮಾ, ಕಾರ್ಯದರ್ಶಿ ಕೆ ಜಿ ವಿರೇಶ, ವರಲಕ್ಷ್ಮೀ, ಗೋಕಾರಮ್ಮ, ಶಾರದ, ಸರೋಜ, ಜಾನಮ್ಮ, ಮಲ್ಲಮ್ಮ, ಇಬ್ರಾಹಿಂ ಸೇರಿದಂತೆ ಬಹುತೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X