ಬೀದರ್‌ | ಕೃಷಿ ಭೂಮಿ ಕಸಿದುಕೊಳ್ಳಲು ಮುಂದಾದ ಅರಣ್ಯ ಇಲಾಖೆ; ತಾಂಡಾ ಜನರು ಕಂಗಾಲು

Date:

Advertisements

ಹುಲಸೂರ ತಾಲೂಕಿನ ಮಿರಕಲ್ ತಾಂಡಾ ಜನರು ಸಾಗುವಳಿ ಮಾಡಿಕೊಂಡು ಬರುತ್ತಿರುವ ಕೃಷಿ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒತ್ತುವರಿ ಮಾಡುತ್ತಿರುವುದನ್ನು ಕೂಡಲೇ ತಡೆ ಹಿಡಿಯಬೇಕೆಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಈ ಕುರಿತು ಹುಲಸೂರ್‌ ಪಟ್ಟಣದ ತಹಸೀಲ್‌ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ರೈತರು ಭಾರತೀಯ ದಲಿತ ಪ್ಯಾಂಥರ್‌ ನೇತ್ರತ್ವದಲ್ಲಿ ತಹಸೀಲ್ದಾರ್‌ ಶಿವಾನಂದ ಮೇತ್ರೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಸಿ.ಫಾರಂ ಮಂಜೂರಾತಿಯ ಕೃಷಿ ಭೂಮಿಯನ್ನು ಏಕಾಏಕಿಯಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಕೆಲವು ದಿನಗಳಿಂದ ನಮ್ಮ ಭೂಮಿಯಲ್ಲಿ ಬೆಳೆದ ಬೆಳೆ ನಾಶಪಡಿಸಿ ಬೋಲ್ಡೊಜರ್‌ದಿಂದ ಗುಂಡಿ ಅಗೆಯುತ್ತಿದ್ದಾರೆ. ಇದರಿಂದ ನಮಗೆ ಭೂಮಿ ಕಳೆದುಕೊಳ್ಳುವ ಆತಂಕ ಶುರುವಾಗಿದೆʼ ಎಂದು ಗೋಳು ತೋಡಿಕೊಂಡರು.

Advertisements

ʼನಮ್ಮ ಬದುಕಿಗೆ ಆಧಾರ ಆಗಿರುವ ಉಳುಮೆ ಭೂಮಿ ಕಸಿದುಕೊಂಡರೆ ನಾವು ಜೀವನ ಸಾಗಿಸಲು ಸಾಧ್ಯವಿಲ್ಲ. ಯಾವುದೇ ಮಾಹಿತಿ ನೀಡದೇ ಭೂಮಿ ಕಸಿದುಕೊಂಡರೆ ನಾವು ಬೀದಿಪಾಲಾಗುತ್ತೇವೆ. ಹೀಗಾಗಿ ಕೂಡಲೇ ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಭೂಮಿ ಒತ್ತುವರಿ ಕೂಡಲೇ ತಡೆಹಿಡಿಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮನರೇಗಾ ಮಾನವ ದಿನ 200ಕ್ಕೆ ಹೆಚ್ಚಿಸಲು ಗ್ರಾಕೂಸ್‌ ಆಗ್ರಹ

ಈ ಸಂದರ್ಭದಲ್ಲಿ ಭಾರತೀಯ ದಲಿತ ಪ್ಯಾಂಥರ್‌ ತಾಲೂಕಾಧ್ಯಕ್ಷ ಅಶೋಕ ಸಿಂಧೆ, ಅಶೋಕ ಹಾಲಹಳ್ಳಿ, ದೇವಾನಂದ ಟೋಳೆ, ಸತಿಷ ಗಾಯಕವಾಡ, ದತ್ತಾ ಮೋರೆ, ಲೋಕೇಶ ಮೋರೆ, ಅಶೋಕ ಕಾಂಬಳೆ, ಸುಭಾಷ ರಾಠೋಡ್‌ ಸೇರಿದಂತೆ ಮಿರಕಲ್‌ ತಾಂಡಾದ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X