ವಿಜಯಪುರ | ಸಂವಿಧಾನ ವಿರೋಧಿಗಳಿಗೆ ಭಾರತದಲ್ಲಿ ಬದುಕಲು ಅವಕಾಶವಿಲ್ಲ: ಶ್ರೀನಾಥ್ ಪೂಜಾರಿ

Date:

Advertisements

ಅಂಬೇಡ್ಕರ್ ಅವರು ಸಂವಿಧಾನದ ರೂಪದಲ್ಲಿ ನಮ್ಮೊಂದಿಗಿದ್ದಾರೆ. ಸಂವಿಧಾನವನ್ನು ಕಾಪಾಡುವುದು ನಮ್ಮ ಕರ್ತವ್ಯ. ಸಂವಿಧಾನ ವಿರೋಧಿ ಹೇಳಿಕೆ ನೀಡುವವರಿಗೆ ಭಾರತದಲ್ಲಿ ಬದುಕಲು ಅವಕಾಶವಿಲ್ಲ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರ್ ವಿಜಯಪುರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಪ್ರಯುಕ್ತ ಹಮ್ಮಿಕೊಂಡ ಬೃಹತ್ ಕ್ಯಾಂಡಲ್ ಮಾರ್ಚ ಕಾರ್ಯಕ್ರಮದಲ್ಲಿ ಗುಡುಗಿದರು.

ನಗರದ ಶಿವಾಜಿ ವೃತ್ತದಿಂದ ಆರಂಭಗೊಂಡ ಕ್ಯಾಂಡಲ್ ಈ ಬೃಹತ್ ಮಾರ್ಚ ಅಂಬೇಡ್ಕರ್  ವೃತ್ತದ ವರೆಗೂ ಸಾಗಿತ್ತು. ಕ್ಯಾಂಡಲ್ ಮಾರ್ಚ’ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿ ಯುವಜನರು ಅಲ್ಲದೇ ಅಂಬೇಡ್ಕರ್ ಅನುಯಾಯಿಗಳು ಭಾಗವಹಿಸಿ, ಜೈ ಭೀಮ್ ಘೋಷಣೆ ಕೂಗುತ್ತಾ ಉತ್ಸಾಹದಿಂದ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಧುನಿಕ ಭಾರತದಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೋರಾಟ ಮತ್ತು ಅವರು ಬರೆದ ಸಂವಿಧಾನವೇ ಕಾರಣವಾಗಿದೆ. ಅಂಬೇಡ್ಕರ್ ಅವರು ಸಂವಿಧಾನ ರೂಪದಲ್ಲಿ ನಮ್ಮೊಂದಿಗೆ ಇದ್ದಾರೆ. ಆದ್ದರಿಂದ ಸಂವಿಧಾನ ಕಾಪಾಡುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗಬೇಕು ಮತ್ತು ಸಂವಿಧಾನ ರಕ್ಷಣೆಗೆ ಶಪತ ಮಾಡಬೇಕು. ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಸಮಾನತೆ ತಂದುಕೊಟ್ಟ ಮಹಾ ಮಾನವತವಾದಿ ಅಂಬೇಡ್ಕರ್ ಅವರ ವಿಚಾರ ಇಂದಿನ ವಿದ್ಯಾರ್ಥಿ ಯುವ ಜನರಿಗೆ ಆದರ್ಶ ದೀಪವಾಗಿದೆ ಎಂದರು.

Advertisements

ನಮ್ಮ ದೇಶಕ್ಕೆ ಸಂವಿಧಾನ ಒದಗಿಸದೇ ಇದ್ದಿದ್ದರೆ ಶೋಷಿತ ಸಮುದಾಯಗಳು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲರಾಗುತ್ತಿರಲಿಲ್ಲ. ಶೋಷಿತ ಸಮುದಾಯಗಳಿಗೆ ಎಲ್ಲಾ ರಂಗದಲ್ಲಿ ಅವಕಾಶಗಳು ಸಿಕ್ಕಿರುವುದು ಸಂವಿಧಾನದಿಂದ ಮಾತ್ರ. ಸಂವಿಧಾನವು ನಮ್ಮ ದೇಶದ ಪವಿತ್ರ ಗ್ರಂಥವಾಗಿದೆ. ಅದನ್ನು ಇಂದಿನ ವಿದ್ಯಾರ್ಥಿ ಮತ್ತು ಯುವಕರು ಅರ್ಥೈಸಿಕೊಂಡು ಮೈಗೂಡಿಸಿಕೊಳ್ಳುವುದು ತುರ್ತು ಹಾಗೂ ಅಗತ್ಯ. ದೇಶದಲ್ಲಿ ಹೊರಬರುತ್ತಿರುವ ಸಂವಿಧಾನ ವಿರೋಧಿ ಹೇಳಿಕೆಯನ್ನು ದಲಿತ ವಿದ್ಯಾರ್ಥಿ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ. ಸಂವಿಧಾನ ವಿರೋಧಿ ಹೇಳಿಕೆ  ನೀಡುವವರಿಗೆ ಭಾರತ ದೇಶದಲ್ಲಿ ಬದುಕಲು ಅವಕಾಶವಿಲ್ಲ ಎಂದು ಗುಡುಗಿದರು.

ಈ ವರದಿ ಓದಿದ್ದೀರಾ? ಬೆಳಗಾವಿ | ಗೂಗಲ್ ಮ್ಯಾಪ್ ನಂಬಿ ಮಧ್ಯರಾತ್ರಿ ಕಾಡಿನಲ್ಲಿ ಸಿಲುಕಿಕೊಂಡ ಪ್ರಯಾಣಿಕರು

ಈ ಸಂದರ್ಭದಲ್ಲಿ ಪರಿಷತ್’ನ ರಾಜ್ಯ ಸಂಚಾಲಕ ಬಾಲಾಜಿ ಎಂ ಕಾಂಬಳೆ, ನ್ಯಾಯವಾದಿಗಳಾದ ವಿದ್ಯಾವತಿ ಅಂಕಲಿಗಿ, ಫಾದರ್ ಟಿಯೋಲ್ ಮಾಚದೊ, ಸಂತೋಷ ಪೂಜಾರಿ, ರೈತ ಸಂಘಟನೆ ಜಿಲ್ಲಾ ಮುಖಂಡ ಸಂಗಮೇಶ ಸಗರ, ಜಿಲ್ಲಾ ಮುಖಂಡ ಅಕ್ಷಯ ಅಜಮನಿ, ಮಾದೇಶ ಛಲವಾದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X