ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನ; ಮುಂದಿನ ಪೀಳಿಗೆಗೆ ಆಹಾರ ಉಳಿಸುವ ಜಾಗೃತಿ ಗೋಷ್ಠಿ ನಡೆಸುವಂತೆ ಮನವಿ

Date:

Advertisements

ಮಂಡ್ಯದಲ್ಲಿ ಜರುಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಹಾರದ ವ್ಯವಸ್ಥೆ ಹಾಗೂ ಮುಂದಿನ ಪೀಳಿಗೆಗೆ ಆಹಾರ ಉಳಿಸುವ ಬಗ್ಗೆ ಯಾವ ರೀತಿ ಜಾಗೃತಿ ಮೂಡಿಸಬೇಕು? ಎಂಬ ನಿಟ್ಟಿನಲ್ಲಿ ಒಂದು ಗೋಷ್ಠಿಯನ್ನು ನಡೆಸಬೇಕು. ಜತೆಗೆ ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಆಹಾರ ವ್ಯರ್ಥವಾಗದಂತೆ ತಡೆಯಲು ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನ ಆಹಾರ ಸಂರಕ್ಷಣಾ ಜಾಗೃತಿ ಅಭಿಯಾನದಿಂದ ಮನವಿ ಮಾಡಿದರು.

ಕೃಷಿ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿಯವರಿಗೆ ಮನವಿ ನೀಡಿದ್ದು, “ಕನ್ನಡ ನಾಡುನುಡಿಯ ಹಬ್ಬ ಎಂದೇ ಖ್ಯಾತಿ ಪಡೆದಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಈ ಸಮ್ಮೇಳನದಲ್ಲಿ, ಮದುವೆ ಬೀಗರ ಊಟ ಸೇರಿ ಎಲ್ಲ ರೀತಿಯ ಬೇರೆಬೇರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಆಹಾರ ತಯಾರಿಸಿ ಆಹಾರ ವ್ಯರ್ಥವಾಗುತ್ತಿರುವುದನ್ನು ತಡೆಗಟ್ಟುವುದು ಹೇಗೆ?” ಎಂಬುದರ ಕುರಿತು ಜಾಗೃತಿ ಗೋಷ್ಠಿ ನಡೆಸಬೇಕು” ಎಂದು ಒತ್ತಾಯಿಸಿದರು.

ಆಹಾರ ಉಳಿಸುವ ಜಾಗೃತಿಗೋಷ್ಠಿ

“ಸಸ್ಯಾಹಾರ ಮತ್ತು ಮಾಂಸಾಹಾರದ ಕುರಿತು ಇರುವ ಕೀಳರಿಮೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಸಂವಿಧಾನದ ಅರ್ಟಿಕಲ್‌ 51ಎ(ಹೆಚ್) ಆಧಾರದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು, ಮಾಂಸಾಹಾರ ಮತ್ತು ಸಸ್ಯಾಹಾರದ ನಡುವಿನ ಮೇಲು ಕೀಳು ಹಾಗೂ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಸಸ್ಯಾಹಾರ, ಮಾಂಸಾಹಾರ ಎರಡನ್ನೂ ಸಮ್ಮೇಳನದ ಊಟದ ಪಟ್ಟಿಯಲ್ಲಿ ಸೇರಿಸಿ ಮಾಂಸಾಹಾರದ ಬಗ್ಗೆ ಮತ್ತು ಅದನ್ನು ಸೇವಿಸುವವರ ಬಗ್ಗೆ ಇರುವ ತಾರತಮ್ಯ ಮನೋಭಾವವನ್ನು ತೊಡೆದುಹಾಕಬೇಕು” ಎಂದು ಒತ್ತಾಯಿಸಿದರು.

Advertisements
This image has an empty alt attribute; its file name is --714x1024.jpg

“ಆಹಾರ ಹಕ್ಕು ಹಾಗೂ ಸ್ವಾತಂತ್ರ್ಯದ ಬಗ್ಗೆ ವಿಚಾರ ಸಂಕಿರಣ ಏರ್ಪಡಿಸಬೇಕು. ನಮ್ಮ ಈ ಬೇಡಿಕೆಗಳನ್ನು ಜಾರಿಗೊಳಿಸಲು ಅಗತ್ಯಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಪ್ರೀತಿಯ ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತೇವೆ” ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಪ್ರತಿ ವಿದ್ಯಾರ್ಥಿಗೆ ಮಾಸಿಕ ನಿರ್ವಹಣಾ ಹಣ ಹೆಚ್ಚಿಸುವಂತೆ ಸಚಿವರಿಗೆ ಮನವಿ

“ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿಯವರು ಸಚಿವರ ಮನೆಗೆ ಆಗಮಿಸಿದ್ದರು. ಇದೇ ವೇಳೆ ಅವರಿಗೂ ಆಹಾರ ವ್ಯಸ್ಥೆಯ ಪತ್ರಕೊಟ್ಟು ಸಮ್ಮೇಳನದಲ್ಲಿ ಮೊಟ್ಟೆ, ಕೋಳಿ ಮಾಂಸ ಕೊಡಬೇಕು” ಎಂದು ಒತ್ತಾಯ ಮಾಡಿದರು.

ವಚನ ಉಮೇಶ್, ಮೈಸೂರಿನ ರೇವಣ್ಣ, ವೆಂಕಟಗಿರಿ, ಸಂಜಯ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X