ಅನಾರೋಗ್ಯ | ಚಿಕಿತ್ಸೆಗೆ ತೆರಳುವ ಮುನ್ನ ತಿರುಪತಿಯಲ್ಲಿ ಮುಡಿ ಕೊಟ್ಟ ಶಿವ ರಾಜ್‌ಕುಮಾರ್

Date:

Advertisements

ನಟ ಶಿವ ರಾಜ್‌ಕುಮಾರ್‌ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅದಕ್ಕೂ ಮುನ್ನ, ತಮ್ಮ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದ ಶಿವ ರಾಜ್‌ಕುಮಾರ್ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.

ಇದೇ ತಿಂಗಳು (ಡಿಸೆಂಬರ್) 18ರಂದು ಚಿಕಿತ್ಸೆಗಾಗಿ ಶಿವರಾಜ್‌ ಕುಮಾರ್ ಅಮೆರಿಕಗೆ ತೆರಳಲಿದ್ದಾರೆ. ಹೀಗಾಗಿ, ಶನಿವಾರ ಶಿವ ರಾಜ್‌ಕುಮಾರ್ ತಮ್ಮ ಪತ್ನಿ ಗೀತಾ, ಮಗಳು ನಿವೇದಿತಾ ಹಾಗೂ ಆಪ್ತರೊಂದಿಗೆ ತಿರುಪತಿಗೆ ತೆರಳಿದ್ದರು. ಗೀತಾ ಅವರೂ ಕೂಡ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.

ಈ ಹಿಂದೆಯೇ, ತಮ್ಮ ಅನಾರೋಗ್ಯದ ಬಗ್ಗೆ ಮಾತನಾಡಿರುವ ಶಿವ ರಾಜ್‌ಕುಮಾರ್, “ʻʻನನಗೆ ಅನಾರೋಗ್ಯ ಇರುವುದು ನಿಜ. ಟ್ರೀಟ್‌ಮೆಂಟ್‌ ನಡಿತಿದೆ. ಯಾರೂ ಆತಂಕ ಪಡಬೇಕಿಲ್ಲ. ಒಟ್ಟು 4 ಸೆಷನ್‌ ಮೂಲಕ ಟ್ರೀಟ್‌ಮೆಂಟ್‌ ನಡಿಯುತ್ತದೆ. ಆನಂತರ ಶಸ್ತ್ರಚಿಕಿತ್ಸೆ ನಡೆಯಲಿದೆ” ಎಂದು ಹೇಳಿದ್ದರು.

Advertisements

ಶಿವ ರಾಜ್​ಕುಮಾರ್ ಅವರು ಕೆಲವು ತಿಂಗಳು ನಟನೆಯಿಂದ ದೂರ ಇರಲಿದ್ದಾರೆ. ಚಿಕಿತ್ಸೆ ಪಡೆದು, ಸಂಪೂರ್ಣ ಚೇತರಿಕೆ ಕಂಡ ಬಳಿಕವೇ ಮತ್ತೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X