ಕರ್ತವ್ಯದಲ್ಲಿ ಲೋಪ ಮತ್ತು ನಿರ್ಲಕ್ಷ್ಯ ಕಂಡು ಬಂದಿರುವ ಹಿನ್ನೆಲೆಯಲ್ಲಿ ಇಡಪನೂರು ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ರಾಯಚೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಇಡಪನೂರು ಠಾಣೆಯ ಪಿಎಸ್ಐ ಅವಿನಾಶ್ ಕಾಂಬ್ಳೆ ಅಮಾನತುಗೊಂಡವರು. ಪೊಲೀಸ್ ಠಾಣೆ ಸರ್ವಾಧಿಕಾರಿಯಂತೆ ಆಗಿತ್ತು, ಠಾಣೆಯಲ್ಲಿ ಅವ್ಯವಹಾರ ರಾಜಾರೋಷವಾಗಿ ನಡೆಯುತ್ತಿತ್ತು ಎಂದು ಸಾರ್ವಜನಿಕರಿಂದ ಆರೋಪ ಕೇಳಿ ಬಂದಿತ್ತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸತೀಶ್ ಜಾರಕಿಹೊಳಿಗೆ ಅವಹೇಳನ; ಪ್ರಕರಣ ದಾಖಲು
ಇಡಪನೂರು ಪಿಎಸ್ ಅವರು ಠಾಣೆಯಲ್ಲಿ ಸರಿಯಾಗಿ ಹಾಜರಾಗದಿರುವುದು, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿರುವುದು ಹಾಗೂ ಅಪಘಾತ ನಡೆದ ವೇಳೆ ಸ್ಥಳ ಪರಿಶೀಲನೆಯ ವಿಳಂಬ ಧೋರಣೆ. ಹೀಗೆ ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ತಿಳಿಸಿದ್ದಾರೆ.