ಮೈಸೂರು ಪಾಲಿಕೆ | ಬಿಜೆಪಿ-ಜೆಡಿಎಸ್‌ ಮೈತ್ರಿ ಇದ್ದರೂ ಕಾಂಗ್ರೆಸ್‌ ವಶವಾದ ಸ್ಥಾಯಿ ಸಮಿತಿ

Date:

Advertisements

ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿವೆ. ಪದೇ ಪದೆ ವಿಳಂಬವಾಗುತ್ತಿದ್ದ ಮೇಯರ್ ಚುನಾವಣೆ ಎಂಟು ತಿಂಗಳ ಹಿಂದೆ ನಡೆದು, ಬಿಜೆಪಿಯ ಶಿವಕುಮಾರ್ ಮೇಯರ್ ಆಗಿ ಆಯ್ಕೆಯಾಗಿದ್ದರು. ಇದೀಗ, ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಮೂರು ಸಮಿತಿಗಳ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್‌ ಪಡೆದುಕೊಂಡಿದೆ. ಅಧಿಕಾರದಲ್ಲಿ ಇಲ್ಲದಿದ್ದರೂ ಕಾಂಗ್ರೆಸ್‌ ಒಂದು ಸಮಿತಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.

ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಗೆ ನಡೆಯಬೇಕಿದ್ದ ಚುನಾವಣೆಯೂ ಮೂರು ಬಾರಿ ಮುಂದೂಡಲ್ಪಟ್ಟು, ಅಂತಿಮವಾಗಿ ಗುರುವಾರ ನಡೆದಿದೆ. ಈ ಹಿಂದೆ, ಜೆಡಿಎಸ್‌-ಬಿಜೆಪಿ ಒಪ್ಪಂದದಂತೆ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಹುದ್ದೆಗಳು ಬಿಜೆಪಿಗೆ ಮತ್ತು ಎಲ್ಲ ಸ್ಥಾಯಿ ಸಮಿತಿಗಳ ಅಧ್ಯಕ್ಷ ಹುದ್ದೆಗಳು ಜೆಡಿಎಸ್‌ಗೆ ನೀಡಬೇಕಾಗಿತ್ತು. ಆದರೆ, ಜೆಡಿಎಸ್‌ ಮಾಡಿಕೊಂಡ ಎಡವಟ್ಟಿನಿಂದ ಒಂದು ಸ್ಥಾಯಿ ಸಮಿತಿ ಕಾಂಗ್ರೆಸ್‌ ಪಾಲಾಗಿದೆ.

ನಾಲ್ಕು ಸ್ಥಾಯಿ ಸಮಿತಿಗಳ ಪೈಕಿ, ಪಟ್ಟಣ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿ ಕಾಂಗ್ರೆಸ್‌ ಪಾಲಾಗಿದೆ. ಈ ಸಮಿತಿಯಲ್ಲಿ ಏಳು ಮಂದಿ ಸದಸ್ಯರಿದ್ದಾರೆ. ಅವರಲ್ಲಿ ಕಾಂಗ್ರೆಸ್‌ನ ಇಬ್ಬರು, ಬಿಜೆಪಿ, ಜೆಡಿಎಸ್‌ ಮತ್ತು ಬಿಎಸ್‌ಪಿಯ ಒಬ್ಬರು ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್‌ ಸದಸ್ಯ ಮತ್ತು ಒಬ್ಬರು ಪಕ್ಷೇತರ ಸದಸ್ಯ ಗೈರಾಗಿದ್ದರು. ಹೀಗಾಗಿ, ಹಾಜರಿದ್ದು ಮತದಾನಕ್ಕೆ ಐದು ಮಂದಿ ಮಾತ್ರ ಇದ್ದರು. ಇವರಲ್ಲಿ ಕಾಂಗ್ರೆಸ್‌ಗೆ ಬಿಎಸ್‌ಪಿ ಸದಸ್ಯೆ ಪಲ್ಲವಿ ಬೇಗಂ ಬೆಂಬಲ ನೀಡಿದರು. ಹೀಗಾಗಿ, ಜೆಡಿಎಸ್ ನಾಮಪತ್ರವನ್ನೇ ಸಲ್ಲಿಸಲಿಲ್ಲ. ಪರಿಣಾಮ, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಎಚ್.ಎಂ ಶಾಂತಕುಮಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ?: ಮೈಸೂರು | ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದ ಉಪನ್ಯಾಸಕನ ಬಂಧನ

ಉಳಿದ ಮೂರು ಸ್ಥಾಯಿ ಸಮಿತಿಗಳು ಜೆಡಿಎಸ್‌ ತೆಕ್ಕೆಗೆ ಸೇರಿದ್ದು, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸವಿತಾ, ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆರ್ ನಾಗರಾಜ್, ಲೆಕ್ಕಪತ್ರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಿ ರಮೇಶ್ ಆಯ್ಕೆಯಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X