ಸಾಗರದಾಚೆಗೂ `ಡೇರ್‌ಡೆವಿಲ್‌ ಮುಸ್ತಾಫಾʼ ಸದ್ದು

Date:

Advertisements

ಪೂರ್ಣಚಂದ್ರ ತೇಜಸ್ವಿ ಅವರ ಕಿರುಕಥೆ ಆಧಾರಿತ ಚಿತ್ರ

ನಿರೀಕ್ಷೆಗೂ ಮೀರಿ ಯಶಸ್ಸು ಕಂಡ ʼಡೇರ್‌ಡೆವಿಲ್‌ ಮುಸ್ತಾಫಾʼ

ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಿರುಕಥೆಯನ್ನು ಆಧರಿಸಿ ತೆರೆಗೆ ಬಂದಿರುವ ʼಡೇರ್‌ಡೆವಿಲ್‌ ಮುಸ್ತಾಫಾʼ ಸಿನಿಮಾ ಎರಡನೇ ವಾರವೂ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಕ್ರಿಯೆ ವ್ಯಕ್ತವಾದ ಬೆನ್ನಲ್ಲೇ ಸಿನಿಮಾವನ್ನು ಸಾಗರದಾಚೆಗೆ ಬಿಡುಗಡೆ ಮಾಡುವಲ್ಲಿ ಚಿತ್ರತಂಡ ಯಶಸ್ವಿಯಾಗಿದೆ.

Advertisements

ʼಡೇರ್‌ಡೆವಿಲ್‌ ಮುಸ್ತಾಫಾʼ ಸಿನಿಮಾ ಬೆಂಗಳೂರು, ಮೈಸೂರು, ತುಮಕೂರು, ಧಾರವಾಡ, ಗುಲ್ಬರ್ಗ, ಉಡುಪಿ, ಕುಂದಾಪುರ ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ವಿದೇಶದಲ್ಲಿ ನೆಲೆಸಿರುವ ಕನ್ನಡಿಗರು, ವಿಶೇಷವಾಗಿ ತೇಜಸ್ವಿ ಅವರ ಅಭಿಮಾನಿಗಳು ಈ ಚಿತ್ರವನ್ನು ಸಾಗರದಾಚೆಗೂ ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟ ಹಿನ್ನೆಲೆ ಅಮೆರಿಕಾ, ಕೆನಡಾ, ಜರ್ಮನಿ, ಸ್ವೀಡನ್‌, ನೆದರ್‌ಲ್ಯಾಂಡ್ಸ್‌ ದೇಶಗಳ ಪ್ರಮುಖ ನಗರಗಳಲ್ಲಿ ʼಡೇರ್‌ಡೆವಿಲ್‌ ಮುಸ್ತಾಫಾʼ ಸಿನಿಮಾ ಮೇ 26ರಿಂದ ಪ್ರದರ್ಶನ ಕಾಣುತ್ತಿದೆ.

ಮುಸ್ತಾಫಾ ಮತ್ತು ರಾಮಾನುಜ ಅಯ್ಯಂಗಾರಿ ಪಟಾಲಂನ ನಡುವಿನ ಇರಿಸುಮುರಿಸಿನ ಕಥೆಯಲ್ಲಿ ಹಿರಿಯ ನಟ ಮಂಡ್ಯ ರಮೇಶ್‌ ಅಬಚೂರು ಕಾಲೇಜಿನ ಪ್ರಾಂಶುಪಾಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು, ಸುಂದರ್‌ ವೀಣಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಯುವ ಪ್ರತಿಭೆ ಶಿಶಿರ್‌ ಬೈಕಾಡಿ ಮುಸ್ತಫಾನ ಪಾತ್ರದಲ್ಲಿ ಗಮನ ಸೆಳೆಯುತ್ತಿದ್ದು, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ಸಿನಿಮಾ | ʼಪೂಚಂತೇʼಯ ಪ್ರಸ್ತುತತೆ ಸಾರುವ ʼಡೇರ್‌‌ಡೆವಿಲ್ ಮುಸ್ತಾಫಾʼ

ನವನೀತ್‌ ಶ್ಯಾಮ್‌ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದು, ತೇಜಸ್ವಿ ಅವರ ಅಭಿಮಾನಿಗಳಿಂದಲೇ ತಯಾರಾಗಿರುವ ಚಿತ್ರಕ್ಕೆ ನಟ, ಸಾಹಿತ್ಯಾಸಕ್ತ ಡಾಲಿ ಧನಂಜಯ್ ಬೆಂಬಲವಾಗಿ ನಿಂತಿದ್ದಾರೆ. ತಮ್ಮ ಒಡೆತನದ ಡಾಲಿ ಪಿಕ್ಚರ್ಸ್‌ ಮೂಲಕ ಈ ಚಿತ್ರವನ್ನು ಪ್ರಸ್ತುತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X