ಪೊಲೀಸ್‌ ಶಸ್ತ್ರಾಗಾರಕ್ಕೇ ಇಲ್ಲ ಭದ್ರತೆ; 200 ಬುಲೆಟ್‌ ಕಳವು

Date:

Advertisements

ಶಸ್ತ್ರಾಸ್ತ್ರಗಳನ್ನು ಇರಿಸಲಾಗಿದ್ದ ಪೊಲೀಸ್‌ ಶಸ್ತ್ರಾಗಾರದಲ್ಲಿ 9ಎಂಎಂ ಪಿಸ್ತೂಲ್ ಮತ್ತು ಸ್ವಯಂಚಾಲಿತ ರೈಫಲ್‌ಗಳ 200 ಕಾರ್ಟ್ರಿಜ್‌ಗಳು (ಬುಲೆಟ್‌) ಕಳ್ಳತನವಾಗಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ.

ಮೊರೆನಾ ಜಿಲ್ಲೆಯಲ್ಲಿದ್ದ ಪೊಲೀಸ್ ವಿಶೇಷ ಸಶಸ್ತ್ರ ಪಡೆಗಳ (ಎಸ್‌ಎಎಫ್‌) ವಿಭಾಗದ ಶಸ್ತ್ರಾಗಾರಗಳಲ್ಲಿ ಕಳ್ಳತನ ನಡೆದಿದೆ. ಘಟನೆ ಬಳಿಕ, ಎಸ್‌ಎಎಫ್‌ನ 2 ಮತ್ತು 5ನೇ ಬೆಟಾಲಿಯನ್‌ನ ಕಮಾಂಡೆಂಟ್‌ಗಳು ತಮ್ಮ ಕಂಪನಿಯ ಕಮಾಂಡರ್‌ಗಳನ್ನು ಅಮಾನತುಗೊಳಿಸಿದ್ದಾರೆ.

ಈ ಬಗ್ಗೆ ಮೊರೆನಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್ ಧಕಡ್ ಮಾಹಿತಿ ನೀಡಿದ್ದು, “ಎಸ್‌ಎಎಫ್‌ನ ಎರಡು ಶಸ್ತ್ರಾಸ್ತ್ರಗಳಿಂದ ಪಿಸ್ತೂಲ್‌ಗಳು ಮತ್ತು ಬುಲೆಟ್‌ಗಳು ಕಳವಾಗಿವೆ. ಕಳ್ಳತನವಾಗಿರುವ ಬಗ್ಗೆ ಶಸ್ತ್ರಾಗಾರದ ಗಾರ್ಡ್‌ಗಳು ಮಾಹಿತಿ ನೀಡಿದ್ದಾರೆ. ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.

Advertisements

ಘಟನೆ ಬೆನ್ನಲ್ಲೇ ಚಂಬಲ್ ವಲಯ ಪೊಲೀಸ್ ಮಹಾನಿರೀಕ್ಷಕ ಸುಶಾಂತ್ ಸಕ್ಸೇನಾ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X