ಚಳಿಗಾಲ ಅಧಿವೇಶನ | ನಾಲ್ಕು ದಿನ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚೆ: ಸಭಾಪತಿ ಹೊರಟ್ಟಿ

Date:

Advertisements

ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಚಳಿಗಾಲ ಅಧಿವೇಶನದಲ್ಲಿ ನಾಲ್ಕು ದಿನ ಮೀಸಲಿಡಲಾಗಿದೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಡಿ. 10 ಮತ್ತು 11 ಹಾಗೂ ಡಿ. 17 ಮತ್ತು 18ರಂದು ಕೃಷ್ಣಾ ಮೇಲ್ದಂಡೆ, ಮಹದಾಯಿ-ಕಳಸಾ-ಬಂಡೂರಿ, ತುಂಗ ಭದ್ರಾ, ಕಾರಂಜಾ, ಕೃಷಿ, ಅರಣ್ಯಭೂಮಿ ಅತಿಕ್ರಮಣದಾರರು ಮತ್ತು ಸಂತ್ರಸ್ತರ ಸಮಸ್ಯೆ, ಸಕ್ಕರೆ ಕಾರ್ಖಾನೆ, ತೋಟಗಾರಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ವಿಸ್ತ್ರತ ಚರ್ಚೆ ನಡೆಯಲಿದೆ” ಎಂದು ಹೇಳಿದರು.

“ಈ ಬಾರಿಯ ಅಧಿವೇಶನದ ಕಲಾಪಗಳು ಉತ್ತಮ ರೀತಿಯಲ್ಲಿ ನಡೆಯಬೇಕು. ಯಾವೆಲ್ಲ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ವಿಷಯಪಟ್ಟಿ ಸಿದ್ಧಪಡಿಸಲಾಗಿದೆ. ಶೂನ್ಯವೇಳೆ (ಮಧ್ಯಾಹ್ನ 3.30) ನಂತರ ಈ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ರಾತ್ರಿ 10 ಗಂಟೆಯಾದರೂ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದೇನೆ. ಈ ಕುರಿತು ವಿರೋಧಪಕ್ಷದ ನಾಯಕರ ಜೊತೆ ಮಾತನಾಡಿದ್ದೇನೆ. ಮಂಗಳವಾರ ಸರ್ವಪಕ್ಷಗಳ ಮುಖಂಡರ ಸಭೆ ಕರೆದಿದ್ದು, ಅಲ್ಲಿಯೂ ತಿಳಿಸುತ್ತೇನೆ” ಎಂದರು.

Advertisements

“ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಜನಪ್ರತಿನಿಧಿಗಳ ಕರ್ತವ್ಯ. ಅವುಗಳನ್ನು ಅಧಿವೇಶನದಲ್ಲಿ ಕೂಲಂಕಶವಾಗಿ ಚರ್ಚಿಸಿ ಪ್ರಜಾಪ್ರಭುತ್ವದ ಆಶಯಕ್ಕೆ ತಕ್ಕ ಹಾಗೆ ನಡೆದುಕೊಳ್ಳಬೇಕು. ಕೆಲವು ಶಾಸಕರು ಸಹಿ ಮಾಡಿ ಹಾಗೆಯೇ ಹೋಗುತ್ತಾರೆ. ಅಧಿವೇಶನದಲ್ಲಿ ಪಾಲ್ಗೊಂಡು ಪ್ರಶ್ನೆ ಕೇಳುವಂತೆ ಜನಪ್ರತಿನಿಧಿಗಳಿಗೆ ಮನವರಿಕೆ ಮಾಡುತ್ತಿದ್ದೇವೆ. ಈ ಬಾರಿ ಶೇ 70ರಷ್ಟು ಶಾಸಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X