ಯುಪಿ ಮೇಲೆ ಕರ್ನಾಟಕದ ಪ್ರಭಾವ; ವಿರೋಧಿ ಪಾಳಯದಲ್ಲಿ ಬದಲಾಗುತ್ತಿದೆ ರಾಜಕೀಯ ಸಮೀಕರಣ

Date:

Advertisements

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭರ್ಜರಿ ಗೆಲುವು ಕೇವಲ ರಾಜ್ಯ ರಾಜಕೀಯದ ಮೇಲೆ ಮಾತ್ರವಲ್ಲದೆ, ಹಲವು ರಾಜ್ಯಗಳ ರಾಜಕೀಯದ ಮೇಲೂ ಪ್ರಭಾವ ಬೀರುತ್ತಿದೆ. ಪ್ರತಿಪಕ್ಷಗಳ ಪಾಳಯದಲ್ಲಿ ರಾಜಕೀಯ ಸಮೀಕರಣಗಳು ಬದಲಾಗಿವೆ; ಲೋಕಸಭಾ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳ ಧ್ರುವೀಕರಣಗೊಳ್ಳಲು ನೆರವಾಗುತ್ತಿದೆ.

ಏಕಕಾಲದಲ್ಲಿ ನಡೆದ ಕರ್ನಾಟಕದ ವಿಧಾನಸಭಾ ಚುನಾವಣೆ ಮತ್ತು ಉತ್ತರ ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮುಗಿದ ಬಳಿಕ, ಯುಪಿಯ ರಾಜಕೀಯ ಸಮೀಕರಣಗಳಲ್ಲಿ ಬದಲಾವಣೆಗಳು ಗೋಚರಿಸುತ್ತಿವೆ.

ಚುನಾವಣೆಗೆ ಮುಂಚಿನ ಚಿತ್ರಣ ಕಾಂಗ್ರೆಸ್ ಪಾಲಿಗೆ ನಿರಾಶದಾಯಕವಾಗಿತ್ತು. ಭಾರತದ ಅತೀ ಹಳೆಯ ಪಕ್ಷವು ಹಲವಾರು ರಾಜ್ಯಗಳಲ್ಲಿ ತನ್ನ ಪ್ರಾಬಲ್ಯತೆಯನ್ನು ಕಳೆದುಕೊಳ್ಳಲಾರಂಭಿಸಿತ್ತು. ಈ ಹೊತ್ತಿನಲ್ಲಿ ಕರ್ನಾಟಕದ ಗೆಲುವು ಪಕ್ಷದ ಕಾರ್ಯಕರ್ತರಿಗೆ ಆನೆ ಬಲ ತಂದುಕೊಂಡಿದೆ. ಕರ್ನಾಟಕದಲ್ಲಿಯೂ ಪಕ್ಷವು ತನ್ನ ಕಳೆದುಹೋಗಿದ್ದ ವೈಭವವನ್ನು ಮರಳಿ ಪಡೆದಿದೆ. ಮಾತ್ರವಲ್ಲದೆ, ಪಕ್ಷವು ತನ್ನ ಪುನರುಜ್ಜೀವನಕ್ಕಾಗಿ ಹೋರಾಡುತ್ತಿರುವ ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಕಾರ್ಯಕರ್ತರಲ್ಲಿ ನೈತಿಕ ಶಕ್ತಿಯನ್ನು ಹೆಚ್ಚಿಸಿದೆ.

Advertisements

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ (ಯುಎಲ್‌ಬಿ) ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೂ, ಕಾಂಗ್ರೆಸ್‌ ತನ್ನ ಮತ ಹಂಚಿಕೆಯನ್ನು ಹೆಚ್ಚಿಸಿಕೊಂಡಿದೆ. ಸಮಾಜವಾದಿ ಪಕ್ಷ (ಎಸ್‌ಪಿ), ಬಿಎಸ್‌ಪಿ ಮತ್ತು ಎಐಎಂಐಎಂಗಳ ಸ್ಪರ್ಧೆಯ ಹೊರತಾಗಿಯೂ ಮುಸ್ಲಿಂ ಮತಗಳು ಹೆಚ್ಚಾಗಿ ಕಾಂಗ್ರೆಸ್‌ಗೆ ದಕ್ಕಿವೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವಿನ ಬಳಿಕ, ಯುಪಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್‌ಗೆ ಸಾಧ್ಯವೆಂದು ಅಲ್ಲಿನ ಮುಸ್ಲಿಮರು ನಂಬಿದ್ದಾರೆ. ಉತ್ತರ ಪ್ರದೇಶದಲ್ಲಿ ಒಂದು ದಶಕದ ನಂತರ ಕಾಂಗ್ರೆಸ್‌ಗೆ ಆಶ್ಚರ್ಯಕರ ರೀತಿಯಲ್ಲಿ ಮತಗಳು ಹೆಚ್ಚುತ್ತಿವೆ.

ಉತ್ತರ ಪ್ರದೇಶದಲ್ಲಿ ತಾವು ಬೆಂಬಲಿಸಿದ ಎಸ್‌ಪಿ ಮತ್ತು ಬಿಎಸ್‌ಪಿಯಂತಹ ಪಕ್ಷಗಳು ತಮ್ಮನ್ನು ರಾಜಕೀಯಕ್ಕಾಗಿ ಬಳಸಿಕೊಂಡಿವೆ ಎಂದು ಮುಸ್ಲಿಮರು ಅರಿತುಕೊಂಡಿದ್ದಾರೆ. ಯುಎಲ್‌ಬಿ ಚುನಾವಣಾ ಫಲಿತಾಂಶವು ಒಂದು ಸೂಚನೆಯಾಗಿದ್ದರೆ, 2024ರ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ಮನದಿಚ್ಛೆಯಿಂದ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾರೆ ಎಂದು ಕಾಂಗ್ರೆಸ್‌ ವಕ್ತಾರ ಅಂಶು ದೀಕ್ಷಿತ್ ಹೇಳಿದ್ದಾರೆ.

ಕಾಂಗ್ರೆಸ್‌ನತ್ತ ಮುಸ್ಲಿಮರ ಒಲವು ಹೆಚ್ಚಾಗಿದೆ. ಇದು ರಾಜ್ಯದಲ್ಲಿ ಪಕ್ಷವನ್ನು ಪುನರುಜ್ಜೀವನಗೊಳಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ ಎಂದು ಕೈ ನಾಯಕರು ನಂಬಿದ್ದಾರೆ.

ಈ ಪ್ರವೃತ್ತಿಯು ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾಗಿರುವ ಸಮಾಜವಾದಿ ಪಕ್ಷದಲ್ಲಿ ಕಳವಳ ಹುಟ್ಟುಹಾಕಿದೆ. ಅಲ್ಲಿ, ಮುಸ್ಲಿಂ ಮತಗಳು ಕಾಂಗ್ರೆಸ್‌ನತ್ತ ವಾಲಿದರೆ, ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿಯ ನಿರೀಕ್ಷೆಗಳು ಹುಸಿಯಾಗುತ್ತವೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ಮತ್ತು ಉತ್ತರ ಪ್ರದೇಶದ ಯುಎಲ್‌ಬಿ ಚುನಾವಣೆಗೂ ಮುನ್ನ ಯಾರ ಮೈತ್ರಿಯೂ ತಮಗೆ ಬೇಡವೆಂಬ ನಿಲುವಿನಲ್ಲಿ ಎಸ್‌ಪಿ ಇತ್ತು. ಈಗ ಅದು ತನ್ನ ನಿಲುವು ಬದಲಿಸಿಕೊಳ್ಳುತ್ತಿದೆ ಎನ್ನಲಾಗಿದೆ.

ಆದಾಗ್ಯೂ, ಯುಎಲ್‌ಬಿ ಚುನಾವಣೆಗಳು ಸ್ಥಳೀಯ ಸಮಸ್ಯೆಗಳ ಆಧಾರದ ಮೇಲೆ ನಡೆಯುವುದರಿಂದ ರಾಜ್ಯ ಮತ್ತು ರಾಷ್ಟ್ರೀಯ ಚುನಾವಣೆಗಳ ಮೇಲೆ ಈ ಫಲಿತಾಂಶಗಳ ಪರಿಣಾಮವನ್ನು ನಿರ್ಣಯಿಸುವುದು ಅಸಾಧ್ಯವೆಂದು ಎಸ್‌ಪಿ ವಕ್ತಾರ ಉದಯವೀರ್ ಹೇಳಿದರು.

ಈ ಸುದ್ದಿ ಓದಿದ್ದೀರಾ?: ಯೋಗಿ ಸಿಎಂ ಆದ ನಂತರ ರಾಜ್ಯದಲ್ಲಿ 15 ದಿನಕ್ಕೊಂದು ಎನ್‌ಕೌಂಟರ್‌

ಲೋಕಸಭಾ ಚುನಾವಣೆಯಲ್ಲಿ ಎಎಪಿ ಮೈತ್ರಿಕೂಟದ ಭಾಗವಾಗಲು ಒಪ್ಪಿದರೆ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ 2 ಕ್ಷೇತ್ರಗಳನ್ನು ನೀಡಬಹುದು ಎಂದು ಎಸ್‌ಪಿ ಅಭಿಪ್ರಾಯಪಟ್ಟಿತ್ತು. ಆದರೆ, ಇತ್ತೀಚಿನ ಚುನಾವಣಾ ಫಲಿತಾಂಶಗಳಿಂದಾಗಿ ಕಾಂಗ್ರೆಸ್‌ 18-20 ಸ್ಥಾನಗಳನ್ನು ಕೇಳಬಹುದು ಎಂಬ ಅಭಿಪ್ರಾಯಗಳಿವೆ.

ಅಲ್ಲದೆ, ಮೇ 28 ರಂದು ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಲು ಪ್ರಸ್ತುತ ರಚಿಸಲಾಗಿರುವ ಕಾಂಗ್ರೆಸ್ ನೇತೃತ್ವದ 19 ಪಕ್ಷಗಳ ಸಂಯುಕ್ತ ವಿರೋಧ ಒಕ್ಕೂಟದಲ್ಲಿ ಎಸ್‌ಪಿ ಸೇರ್ಪಡೆಯಾಗಿದೆ. ಇದು, ಕಾಂಗ್ರೆಸ್‌ನ ಹೊಸ ಶಕ್ತಿಯನ್ನು ಎಸ್‌ಪಿ ಒಪ್ಪಿಕೊಳ್ಳುತ್ತಿರುವ ಮೊದಲ ಸಂಕೇತವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಆದರೆ, ಎಸ್‌ಪಿ ಈಗಿರುವಂತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆಯೇ? ಮುಸ್ಲಿಂ ಮತಗಳನ್ನು ಕ್ರೋಡೀಕರಿಸುತ್ತಿರುವ ಕಾಂಗ್ರೆಸ್‌ ಮತ್ತು ಮುಸ್ಲಿಂ ಮತಗಳನ್ನು ತನ್ನ ತೆಕ್ಕೆಯಲ್ಲಿ ಇಟ್ಟುಕೊಂಡಿದ್ದ ಎಸ್‌ಪಿ ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಮತ್ತು ಎಐಎಂಐಎಂನಂತಹ ಪಕ್ಷಗಳನ್ನು ಮುಸ್ಲಿಂ ಮತ ವಿಭಜನೆ ಮಾಡುವುದನ್ನು ತಡೆಯುವತ್ತ ಗಮನಹರಿಸಬೇಕು ಎಂದು ವಿಶ್ಲೇಷಕರು ಹೇಳುತ್ತಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Download Eedina App Android / iOS

X