ಸಂಡೂರು | ಸಚಿವ ಸಂತೋಷ್ ಲಾಡ್ ಅವರ ಆರ್ಥಿಕ ಭಾಷಣಕ್ಕೆ ಸಿಎಂ ಸಿದ್ದರಾಮಯ್ಯ ಫಿದಾ!

Date:

Advertisements

2013-18ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕ ರಾಜ್ಯ ಈಗ ಜಿಡಿಪಿ ಪ್ರಗತಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇಂದ್ರ ಸರಕಾರದ ಆಯವ್ಯಯದ ವರದಿಯಲ್ಲಿ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10% ಬೆಳವಣಿಗೆಯಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವರಿಸಿದರು.

ಅವರು ಇಂದು (ಡಿ.8) ಸಂಡೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, “ಈ ಬೆಳವಣಿಗೆಗೆ ನಮ್ಮ ಕಾರ್ಯಕ್ರಮಗಳು ಕಾರಣ. ಕೇಂದ್ರದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ ಹಿಂದಿನ 50 ವರ್ಷಗಳ ಕಾಲ ರೂಪಿಸಿ ಜಾರಿ ಮಾಡಿದ ಕಾರ್ಯಕ್ರಮಗಳ ಒಟ್ಟು ಪರಿಣಾಮದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಸುಮಾರು 51% ಇದೆ. ಇದನ್ನು ಸಾಧಿಸಲು ನಮ್ಮ ಸರ್ಕಾರದ ಕಾರ್ಯಕ್ರಮಗಳು ಕಾರಣ” ಎಂದರು.

“2013-18 ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ನಾವು ಮುಂಚೂಣಿಯಲ್ಲಿದ್ದೆವು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಮಾಡುವ ವೆಚ್ಚವೂ ರಾಜ್ಯದಲ್ಲಿ ಹೆಚ್ಚು. ಪಂಚ ಗ್ಯಾರಂಟಿ ಕಾರ್ಯಕ್ರಮ ಗಳಿಗಾಗಿ 60 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ದೇಶದ ಬುನಾದಿಯನ್ನು ಹಾಕುವಲ್ಲಿ ಕರ್ನಾಟಕದಲ್ಲಿ ವಿಶೇಷವಾಗಿ ಬಡವರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಹಮ್ಮಿಕೊಂಡಿದೆ. ಬಿಸಿಯೂಟ, ಅಂಗನವಾಡಿಗಳು, ವಿಧಾವ ವೇತನ, ವೃದ್ಧಾಪ್ಯ ವೇತನ ಮುಂತಾದ ಬಡವರ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ” ಎಂದು ಹೇಳಿದರು.

Advertisements

ಬಡವರಿಗಾಗಿ ಹೆಚ್ಚು ಅನುದಾನ

“ರೈತರಿಗೆ ಮೂರು ಲಕ್ಷದವರೆಗೆ ಬಡ್ಡಿ ರಹಿತ ಸಾಲಕ್ಕಾಗಿ ಸುಮಾರು 9.50 ಕೋಟಿ ರೂಪಾಯಿಗಳನ್ನು ಒದಗಿಸಿದೆ.8165 ಕೋಟಿ ರೂ.ಗಳ ರೈತರ ಸಾಲ ಮನ್ನಾ ಮಾಡಲಾಗಿದೆ. ಎಸ್.ಸಿ.ಎಸ್. ಟಿ ಸಾಲ ಮನ್ನಾ, ಗ್ರಾಮ ಪಂಚಾಯತಿಗಳಿಗೆ 3700 ಕೋಟಿ ಅನುದಾನವನ್ನು ನೀಡಲಾಗಿದೆ. ಆಶ್ರಯ ಯೋಜನೆಯಡಿ 2,633 ಕೋಟಿ ರೂಪಾಯಿ , 2013-18 ರ ಅವಧಿಯಲ್ಲಿ 18 ಸಾವಿರ ಕೋಟಿ ಗಳಿಗೂ ಹೆಚ್ಚು ಅನುದಾನ ನೀಡಿ ಬಡವರಿಗೆ ಅನುಕೂಲ ಮಾಡಿರುವುದಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 80 ಸಾವಿರ ಕೋಟಿಗಳನ್ನು ವೆಚ್ಚ ಮಾಡಿದೆ” ಎಂದರು.

“ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ 72 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿದೆ.ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ದೇಶದಲ್ಲಿ 26 ಸಾವಿರ ಕೋಟಿ ಕೈಗಳಿಗೆ ಕೆಲಸವನ್ನು ಒದಗಿಸಲಾಗಿದೆ” ಎಂದು ತಿಳಿಸಿದರು.‌

ವೇದಿಕೆಯಲ್ಲಿ ಸಚಿವ ಸಂತೋಷ್ ಲಾಡ್ ಭಾಷಣ ಮಾಡುತ್ತಿದ್ದರೆ ಸಿಎಂ ಸಿದ್ದರಾಮಯ್ಯ ಅವರ ಕಡೆಯೇ ದೃಷ್ಟಿಯಿಟ್ಟು ಕೇಳುತ್ತಿದ್ದರು. ಭಾಷಣ ಮುಗಿಸಿ ಸಿಎಂ ಪಕ್ಕದಲ್ಲಿ ಲಾಡ್‌ ಬಂದು ಕೂರುತ್ತಿದ್ದಂತೆ ಸಿದ್ದರಾಮಯ್ಯ ಅವರು ಲಾಡ್‌ ಅವರ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X