ಕೋಲಾರ | ಕಲ್ಲು ಕ್ವಾರಿ ಸ್ಫೋಟ; ಓರ್ವ ಕಾರ್ಮಿಕ ಸಾವು

Date:

Advertisements

ಕಲ್ಲು ಕ್ವಾರಿ ಸ್ಫೋಟಗೊಂಡ ಪರಿಣಾಮ ಬಂಡೆಕಲ್ಲು ಬಿದ್ದು 28 ವರ್ಷದ ಕ್ವಾರಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ಕೆಬಿ ಹೊಸಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿವೆ.

ಮೃತ ಕಾರ್ಮಿಕನನ್ನು ಯಾದಗಿರಿ ಜಿಲ್ಲೆಯ ಸೋಮು ಜಾಧವ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ತಮಿಳುನಾಡಿನ ಗೋಪಿ ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕ್ವಾರಿಯಲ್ಲಿ ಬುಧವಾರ ರಾತ್ರಿ 8 ಗಂಟೆಗೆ ಸ್ಫೋಟ ಸಂಭವಿಸಿದೆ. ಬಂಡೆಯೊಂದು ತಗುಲಿ ಸೋಮು ಜಾಧವ್ ಅವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ಹೊಸಕೋಟೆಯ ಎಂಇಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.

Advertisements

“ಕ್ವಾರಿ ಮಾಲೀಕರು ಹಲವಾರು ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೆ, ಅವರು ಸಾಕ್ಷ್ಯ ನಾಶಪಡಿಸುವ ಪ್ರಯತ್ನವನ್ನೂ ಮಾಡಿದ್ದಾರೆ. ಸಂತ್ರಸ್ತರಿಗೆ ಪರಿಹಾರ ಸಿಗುವಂತೆ ನೋಡಿಕೊಳ್ಳುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ತಿಳಿಸಿದ್ದಾರೆ.

ವೇಮಗಲ್ ಪೊಲೀಸರು ಕ್ವಾರಿ ಮಾಲೀಕ ಜಯರಾಮರೆಡ್ಡಿ, ನಿರ್ವಾಹಕ ಅಬ್ದುಲ್ ರೆಹಮಾನ್ ಅಲಿಯಾಸ್ ಮುಜೀಬ್, ಕೃಷ್ಣಮೂರ್ತಿ, ದೇವರಾಜ್ ಮತ್ತು ಸ್ಫೋಟಕ ಸರಬರಾಜುದಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಬ್ದುಲ್ ರೆಹಮಾನ್ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X