ದಾವಣಗೆರೆ | ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಮನೆಗೆ ನುಗ್ಗಿದ ಕಾರು!

Date:

Advertisements

ದಾವಣಗೆರೆ ಹೊರವಲಯದ ಕುಕ್ಕವಾಡ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದ ಕಾರು ತಡೆಗೋಡೆಯನ್ನು ಛಿದ್ರಗೊಳಿಸಿರುವ ಘಟನೆ ಸೋಮವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ.

ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವೃತ್ತದ ಬೆಂಚ್ ಮತ್ತು ಗೋಡೆಗೆ ಬಡಿದು ವೃತ್ತದ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್‌ಗೆ ಬಡಿದು ನಂತರ ಮನೆಯ ಗೋಡೆಗೆ ನುಗ್ಗಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಮನೆಯ ಗೋಡೆಯೂ ಕುಸಿದು ಬಿದ್ದುಹೋಗಿದ್ದು, ರೂಮಿನಲ್ಲಿ ಮಲಗಿದ್ದ ವೃದ್ಧೆ ಗಾಯಗೊಂಡಿದ್ದು, ಮನೆಯ ಕಾಂಪೌಂಡ್ ಗೋಡೆ ಕೂಡ ಕುಸಿದಿದೆ.

ಮನೆಗೆ ನುಗ್ಗಿದ ಕಾರು 1

ಕಾರು ತ್ಯಾವಣಿಗೆ ರಸ್ತೆಯ ಕಡೆಯಿಂದ ದಾವಣಗೆರೆ ಕಡೆಗೆ ಸಾಗುತ್ತಿದ್ದು, ಕಾರಿನಲ್ಲಿ ನಾಲ್ವರು ಇದ್ದರು ಎನ್ನಲಾಗಿದೆ. ಸ್ಥಳೀಯರ ಪ್ರಕಾರ ಅಪಘಾತಕ್ಕೆ ಅತಿ ವೇಗವೇ ಕಾರಣ, ಕಾರಿನಲ್ಲಿದ್ದ ನಾಲ್ವರೂ ಕೂಡ ಮದ್ಯಪಾನ ಸೇವಿಸಿದ್ದರು ಎಂಬುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ.

Advertisements
ಮನೆಗೆ ನುಗ್ಗಿದ ಕಾರು 2

ಕಾರು ಬಡಿದು ಗೋಡೆ ಕುಸಿದು ಬಿದ್ದಿರುವ ಮನೆ ನಿವೃತ್ತ ಶಿಕ್ಷಕ ದಿವಂಗತ ಸುರೇಂದ್ರಪ್ಪ ಎನ್ನುವವರಿಗೆ ಸೇರಿದ್ದು ಎನ್ನಲಾಗಿದ್ದು, ರೂಮಿನಲ್ಲಿ ಮಲಗಿದ್ದ ಅವರ ಧರ್ಮ ಪತ್ನಿ ಲಲಿತಮ್ಮ ಅವರಿಗೆ ಕೆಲವು ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | 14ನೇ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಪ್ರೊ. ಎ ಬಿ ರಾಮಚಂದ್ರಪ್ಪ ಆಯ್ಕೆ

ಕಾರು ಬಡಿದ ತೀವ್ರತೆಗೆ ಅಂಬೇಡ್ಕರ್ ವೃತ್ತದಲ್ಲಿ ಪಾದಾಚಾರಿಗಳು ಕುಳಿತುಕೊಳ್ಳಲು ಹಾಕಿರುವ ಸಿಮೆಂಟ್ ಆಸನ ಮತ್ತು ಕಾಂಪೌಂಡ್‌ನ ಮೂಲೆ ಕೂಡ ನುಜ್ಜುಗುಜ್ಜಾಗಿ ಬಿದ್ದಿದೆ.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X