ಬೆಳಗಾವಿ | ಸಾಂಸ್ಕೃತಿಕ ಚಟುವಟಿಕೆಗಳಿಂದ ಕಲಿಕೆ ಸಮರ್ಪಕವಾಗಲು ಸಾಧ್ಯ: ಡಿ.ಎಸ್ ವಗ್ಗರ

Date:

Advertisements

ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಕಲಿಕೆ ಸಮರ್ಪಕವಾಗಲು ಸಾಧ್ಯ ಎಂದು ಅಧ್ಯಾಪಕ ಡಿ.ಎಸ್. ವಗ್ಗರ ಹೇಳಿದರು.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಸ್.ವಿ ಬೆಳ್ಳುಬ್ಬಿ ಮಹಾವಿದ್ಯಾಲಯ ಮತ್ತು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸಹಯೋಗದಲ್ಲಿ ನಡೆದ ಕಾಲೇಜು ರಂಗ ತರಬೇತಿ ಶಿಬಿರದಲ್ಲಿ ಸಿದ್ದಗೊಂಡ ಡಾ.ಚಂದ್ರಶೇಖರ ಕಂಬಾರರ ʼಶಿವರಾತ್ರಿʼ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼರಂಗಭೂಮಿ ಮನುಷ್ಯನಿಗೆ ಅರಿವು ನೀಡುವ ಕಾರ್ಯ ಮಾಡುತ್ತದೆ. ನಾಟಕದಲ್ಲಿ ಬರುವ ಪಾತ್ರಗಳು ನಮ್ಮ ನಡೆ-ನುಡಿಯನ್ನು ಹೋಲುವಂತಹದ್ದಾಗಿರುತ್ತದೆʼ ಎಂದರು.

ಕಾರ್ಯಕ್ರಮದಲ್ಲಿ ನಿರ್ದೇಶಕ ಝಾಕೀರ ನದಾಫ್‌, ಹಿರಿಯ ಕಲಾವಿದ ಕಾಶಪ್ಪ ಜಂಬೂದ್ವೀಪ, ಶಿವಾನಂದ ತಾರಿಹಾಳ ಶಶಿಧರ ಹಾಳಕೇರಿ, ನಿರ್ದೇಶಕ ಕಲ್ಲಪ್ಪ ಪೂಜೇರು ಹಾಗೂ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಮತ್ತು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisements

ಈ ವರದಿ ಓದಿದ್ದೀರಾ? ಹಾವೇರಿ | ಸಾಲಭಾದೆ: ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಎನ್. ಆ‌ರ್.ಸವತಿಕರ ವಹಿಸಿದ್ದರು. ಯಲ್ಲವ್ವ ಪಟ್ಟದಕಲ್ಲು ಮತ್ತು ಸಂಗಡಿಗರು ಪ್ರಾರ್ಥಿಸಿದರು. ಪ್ರೊ.ಕೆ.ರಾಮರೆಡ್ಡಿ ಸ್ವಾಗತಿಸಿದರು. ಮೋಹನ್ ಬೆಣಚಮರ್ಡಿ ನಿರೂಪಿಸಿದರು. ಡಾ. ಅರುಂಧತಿ ಬದಾಮಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X