ಗುಬ್ಬಿ | ಚಿರತೆ ದಾಳಿಗೆ 9 ಕುರಿಗಳ ಬಲಿ : ಆತಂಕದಲ್ಲಿ ಸುರುಗೇನಹಳ್ಳಿ ಗ್ರಾಮಸ್ಥರು.

Date:

Advertisements

ತೋಟದಮನೆಯ ಕುರಿ ರೊಪ್ಪಕ್ಕೆ ನುಗ್ಗಿದ ಚಿರತೆ 9 ಕುರಿಗಳ ಬಲಿ ಪಡೆದ ಘಟನೆ ತಾಲ್ಲೂಕಿನ ಕಸಬ ಹೋಬಳಿ ಸುರುಗೇನಹಳ್ಳಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಕೃಷ್ಣಪ್ಪ ಎಂಬ ರೈತರಿಗೆ ಸಂಬಂಧಿಸಿದ ಕುರಿಗಳ ರೊಪಕ್ಕೆ ತಡರಾತ್ರಿ ನುಗ್ಗಿದ ಚಿರತೆ ಹತ್ತಾರು ಕುರಿಗಳ ಮಧ್ಯೆ 9 ಕುರಿಗಳ ಕುತ್ತಿಗೆ, ಹೊಟ್ಟೆ ಬಗೆದು ಬಲಿ ಪಡೆದಿದೆ. ಅಂದಾಜು ಒಂದೂವರೆ ಲಕ್ಷ ಬೆಲೆ ಬಾಳುವ ಕುರಿಗಳು ರೈತನ ಪಾಲಿಗೆ ನಷ್ಟ ತಂದಿದೆ.

ಈಗಾಗಲೇ ಸುರುಗೇನಹಳ್ಳಿ ಗ್ರಾಮದ ಸುತ್ತಮುತ್ತಲೂ ಇರುವ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಳ್ಳುವ ಚಿರತೆಗಳು ಈ ಭಾಗದ ರೈತರಲ್ಲಿ ಆತಂಕ ತಂದಿದೆ. ಈ ಹಿಂದೆ ಬ್ಯಾಟಪ್ಪನಪಾಳ್ಯ ಗ್ರಾಮದಲ್ಲಿ ಕುರಿಗಳು, ಮೇಕೆಗಳ ಬಳಿ ಪಡೆದ ಘಟನೆ ನಡೆದಿತ್ತು ಎಂದು ಸ್ಥಳೀಯರು ತಮ್ಮ ಅಳಲು ತೋಡಿಕೊಂಡರು.

Advertisements

ಸುರುಗೇನಹಳ್ಳಿ ಪ್ರೌಢಶಾಲೆಯ ಸಮೀಪದಲ್ಲಿ ಚಿರತೆ ಬೋನಿನಲ್ಲಿ ಸೆರೆಯಾಗಿತ್ತು. ಕಡಬ ಹೋಬಳಿ ಸೇರಿದಂತೆ ಹಲವು ಬಾರಿ ಚಿರತೆಗಳು ಗ್ರಾಮಸ್ಥರ ಕಣ್ಣಿಗೆ ಕಾಣಿಸಿಕೊಂಡಿವೆ. ಎಲ್ಲಾ ಪ್ರಕರಣದ ಹಿನ್ನಲೆ ಇಲ್ಲಿರುವ ಚಿರತೆ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಚುರುಕುಗೊಳ್ಳಬೇಕು ಎಂದು ರೈತ ಅಶೋಕ್ ಆಗ್ರಹಿಸಿದರು

“ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ ಮೂಲಕ ಬದುಕು ಕಟ್ಟಿಕೊಂಡ ಬಡ ರೈತರಿಗೆ ಚಿರತೆ ಹಾವಳಿ ತೀವ್ರ ನಷ್ಟ ತಂದಿದೆ. ದಿಢೀರ್ ಈ ನಷ್ಟ ಇಡೀ ಜೀವನಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹತ್ತು ಸಾವಿರ ಬೆಲೆ ಬಾಳುವ ಕುರಿಗೆ ಮೂರು ಸಾವಿರ ಕೊಟ್ಟರೆ ಪ್ರಯೋಜನವಿಲ್ಲ. ಕುರಿ ಮೇಕೆಗೆ ಶೇಕಡಾ 30 ರಷ್ಟು ಪರಿಹಾರ ಸಿಗುತ್ತಿದೆ. ಸರ್ಕಾರ ಕೂಡಲೇ ಕಾಡು ಪ್ರಾಣಿ ದಾಳಿಗೆ ಶೇಕಡಾ 100 ರಷ್ಟು ಪರಿಹಾರ ನೀಡಬೇಕು ಎಂದು ರೈತ ಸಂಘ ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಒತ್ತಾಯಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X