ರಾಜ್ಯದ ಮುಖ್ಯಮಂತ್ರಿ, ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಕೇಂದ್ರದ ಮಾಜಿ ಸಚಿವರಾಗಿ ಸೇವೆ ಸಲ್ಲಿಸಿರುವಂತಹ ಮಾಜಿ ಸಿಎಂ ಎಸ್ ಎಂ ಕೃಷ್ಣ ಇನ್ನಿಲ್ಲ ಎಂಬುದು ಅತ್ಯಂತ ನೋವು ಮತ್ತು ದುಃಖದ ಸಂಗತಿಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಸಂತಾಪ ಸೂಚಿಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ತಮ್ಮ ಶೋಕ ಸಂತಾಪದ ವೇಳೆ ಮಾತನಾಡಿ, “ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಸ್ಪರ್ಶ ನೀಡಿದ ಕೀರ್ತಿ ಮತ್ತು ಗೌರವ ಎಸ್ ಎಂ ಕೃಷ್ಣ ಅವರಿಗೆ ಸಲ್ಲುತ್ತದೆ. ಇವರು ನಮ್ಮ ಜಿಲ್ಲೆಯ ಅಳಿಯ ಎಂಬ ಹೆಮ್ಮೆ ನಮಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಯುವಜನರು ಸಂವಿಧಾನದ ಮೌಲ್ಯಗಳನ್ನು ಅರಿಯಬೇಕಿದೆ
“ಸನ್ಮಾನ್ಯರ ನಿಧನದಿಂದಾಗಿ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ, ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ” ಎಂದರು.