ಹಾಸನ | ನ್ಯಾಯ ಒದಗಿಸುವಂತೆ ಗೂಡ್ಸ್‌ ಆಟೊ ಚಾಲಕರ ಆಗ್ರಹ

Date:

Advertisements

ಪ್ಯಾಸೆಂಜರ್ ಆಟೊದವರು ಪ್ರಯಾಣಿಕರ ಜತೆಗೆ ಸರಕು(ಲಗೇಜ್‌)ಗಳನ್ನೂ ತುಂಬಿಕೊಂಡು ಬಾಡಿಗೆ ಹೊಡೆಯುತ್ತಿರುವುದರಿಂದ ಗೂಡ್ಸ್ ಆಟೊ ಚಾಲಕರಿಗೆ ನಷ್ಟ ಉಂಟಾಗುತ್ತಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ನ್ಯಾಯ ಒದಗಿಸಿಕೊಡಬೇಕು ಎಂದು ಗೂಡ್ಸ್‌ ಆಟೊ ಚಾಲಕರು ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

“ಹಾಸನ ತಾಲೂಕಿನ ಸುತ್ತಮುತ್ತಲಿನ ಚಾಲಕರು ಗೂಡ್ಸ್ ಆಟೊ ಓಡಿಸಿಕೊಂಡು ಜೀವನ ನಡೆಸುತ್ತಿದ್ದೇವೆ. ಹಾಸನ ನಗರದಲ್ಲಿ ಕೆಲವು ಪ್ಯಾಸೆಂಜ‌ರ್ ಆಟೊ ಓಡಿಸುತ್ತಿರುವ ಚಾಲಕರು, ಈ ಆಟೊಗಳಲ್ಲಿ ಅಕ್ರಮವಾಗಿ ಸರಕು ತುಂಬಿಕೊಂಡು ತಾಲೂಕು ಹಾಗೂ ಜಿಲ್ಲೆಯಿಂದ ಜಿಲ್ಲೆಗೆ ಬಾಡಿಗೆ ಮಾಡುತ್ತಿರುತ್ತಾರೆ. ಇದರಿಂದ ಗೂಡ್ಸ್ ಆಟೊ ಇಟ್ಟುಕೊಂಡಿರುವ ನಮಗೆ ತುಂಬಾ ನಷ್ಟ ಉಂಟಾಗಿದೆ” ಎಂದು ಗೂಡ್ಸ್ ವಾಹನ ಚಾಲಕ ವೇದಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.

“ವಾಹನದ ಸಾಲದ ಕಂತುಗಳನ್ನು ಕಟ್ಟಲು, ಮನೆ ಬಾಡಿಗೆ ಕಟ್ಟಲು, ಇನ್ಷೂರೆನ್ಸ್ ಕಟ್ಟಲು ಹಾಗೂ ಜೀವನ ನಡೆಸಲು ತುಂಬಾ ಸಮಸ್ಯೆಯಾಗಿದೆ. ದಯಮಾಡಿ ಪ್ಯಾಸೆಂಜರ್ ಆಟೊದವರು ಈ ರೀತಿ ಅಕ್ರಮವಾಗಿ ಲಗೇಜ್‌ ತುಂಬಿಕೊಂಡು ಬಾಡಿಗೆ ಮಾಡುತ್ತಿರುವುದನ್ನು ತುರ್ತಾಗಿ ಮತ್ತು ಕಡ್ಡಾಯವಾಗಿ ನಿಲ್ಲಿಸಬೇಕು. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಿಕೊಡಬೇಕು” ಎಂದು ಮನವಿ ಮಾಡಿದರು.

Advertisements

ಇದನ್ನೂ ಓದಿದ್ದೀರಾ?ಹಾಸನ | ಪಿಡಿಒ ಹುದ್ದೆಗೆ ಪರೀಕ್ಷೆ; ಪರೀಕ್ಷಾರ್ಥಿಗಳ ಕೈ ತೋಳಿನ ಬಟ್ಟೆ ಕತ್ತರಿಸಿದ ಅಧಿಕಾರಿಗಳು

ಈ ವೇಳೆ ಗೂಡ್ಸ್‌ ಆಟೊ ಚಾಲಕ ಪಾಂಡುರಂಗ, ಫಯಾಜ್, ಶಿವಣ್ಣ, ಪ್ರವೀಣ್, ಪರಮೇಶ್, ಅಶ್ವಿನ್, ಹರೀಶ್, ಧನಂಜಯ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X