ಕೊಡಗು | ಕೆಎಸ್‌ಆರ್‌ಟಿಸಿ ಬಸ್‌ ಚಾಲನೆ ವೇಳೆ ಮೊಬೈಲ್ ಬಳಕೆ; ಚಾಲಕ ಬಂಧನ

Date:

Advertisements

ವಾಹನಗಳ ಚಾಲನೆ ವೇಳೆ ಮೊಬೈಲ್‌ ಬಳಕೆ ಕಾನೂನುಬಾಹಿರ. ಅದು ಗೊತ್ತಿದ್ದರೂ, ಸರ್ಕಾರಿ ಸಾರಿಗೆ ಕೆಎಸ್‌ಆರ್‌ಟಿಸಿಯ ಚಾಲಕರೊಬ್ಬರು ಬಸ್‌ ಚಾಲನೆ ವೇಳೆ ಮೊಬೈಲ್‌ ಬಳಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ವಿಡಿಯೋ ವೈರಲ್‌ ಆಗಿದ್ದು, ಚಾಲಕನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಡಿಪೋ ಬಸ್​ ಚಾಲಕ ವೇಣುಗೋಪಾಲ್ ಎಂಬವರನ್ನು ಬಂಧಿಸಲಾಗಿದೆ. ವೇಣುಗೋಪಾಲ್ ಅವರನ್ನು ಚಾಲನೆಗೆ ನಿಯೋಜಿಸಲಾಗಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮಡಿಕೇರಿಯಿಂದ ಬಿರುನಾಣಿಗೆ ಪ್ರಯಾಣಿಸುತ್ತಿತ್ತು. ಈ ವೇಳೆ, ಚಾಲಕ ಬಳಕೆ ಮಾಡಿದ್ದಾರೆ. ಅದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿಕೊಂಡು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೆ, ಚಾಲನೆ ವೇಳೆ ಮೊಬೈಲ್‌ ಬಳಸುತ್ತಿರುವುದನ್ನು ನಿರ್ವಾಹಕ ರೂಪೇಶ್‌ ಕೂಡ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ವೇಣುಗೋಪಾಲ್, ರೂಪೇಶ್‌ ಜೊತೆಗೆ ಗಲಾಟೆ ಮಾಡಿದ್ದಾರೆ. ಮಾತ್ರವಲ್ಲದೆ, ಡಿಪೋ ಬಳಿ ಕೋವಿ ತಂದು ಗಾಳಿಯಲ್ಲಿ ಗುಂಡು ಹಾರಿಸಿ, ರೂಪೇಶ್‌ನನ್ನು ಕೊಲೆ‌ ಮಾಡುವುದಾಗಿ ವೇಣುಗೋಪಾಲ್‌ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Advertisements

ವೇಣುಗೋಪಾಲ್‌ ಅವರ ವರ್ತನೆಯ ವಿರುದ್ಧ ಕ್ರಮ ಕೈಗೊಂಡಿರುವ ಸಾರಿಗೆ ಸಂಸ್ಥೆ, ಅವರನ್ನು ಅಮಾನತು ಮಾಡಿದೆ. ಮಡಿಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದ್ದು, ಪೊಲೀಸರು ಆರೋಪಿ ವೇಣುಗೋಪಾಲ್​ನನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X