ದಾವಣಗೆರೆ | ಅದಾನಿ ಮೇಲಿನ ಲಂಚ ಪ್ರಕರಣದ ತನಿಖೆ ನಡೆಸುವಂತೆ ಸಿಪಿಐ ಆಗ್ರಹ

Date:

Advertisements

ಅದಾನಿ ಮೇಲಿನ ಲಂಚ ಪ್ರಕರಣ ಕುರಿತು ಜಂಟಿಸದನ ಸಮಿತಿ ಮೂಲಕ ತನಿಖೆ ಹಾಗೂ ಮಣಿಪುರದಲ್ಲಿ ಹಿಂಸಾಚಾರ ಪ್ರಚೋದನೆ ತಡೆಗಟ್ಟುವಂತೆ ಒತ್ತಾಯಿಸಿ ದಾವಣಗೆರೆ ಸಿಪಿಐ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಬಳಿಕ ನಗರದ ಅಶೋಕ ರಸ್ತೆಯ ಪಂಪಾಪತಿ ಭವನದಿಂದ ಪ್ರತಿಭಟನೆ ಮೆರವಣಿಗೆ ಮೂಲಕ ಘೋಷಣೆಗಳನ್ನು ಕೂಗುತ್ತ ಸಾಗಿದ ಸಿಪಿಐ ಕಾರ್ಯಕರ್ತರು ಗಾಂಧಿ ಸರ್ಕಲ್, ಹಳೆ ಬಸ್ ನಿಲ್ದಾಣದ ಮೂಲಕ ಉಪ ವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಅಲ್ಲಿ ಬಹಿರಂಗ ಸಭೆ ನಡೆಸಿದ್ದು, ಉಪ ವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಮುಖಂಡರು, “ಅದಾನಿ ಮೇಲಿನ ಲಂಚ ಪ್ರಕರಣದ ಕುರಿತು ಜೆಪಿಸಿ ಮೂಲಕ ತನಿಖೆ ನಡೆಸಬೇಕು. ಮಣಿಪುರದಲ್ಲಿ ಬಹಳಷ್ಟು ದಿನಗಳಿಂದ ಹಿಂಸಾಚಾರ ಅರಾಜಕತೆ ತಲೆದೋರಿದೆ. ಹಾಗಾಗಿ ಶಾಂತಿ ಮರುಸ್ಥಾಪನೆ ಮಾಡಬೇಕು. ಕೋಮು ಭಾವನೆ ಕೆರಳಿಸಿ ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವುದನ್ನು ತಡೆಗಟ್ಟಬೇಕು” ಎಂದು ಒತ್ತಾಯಿಸಿದರು.

Advertisements

ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ “ದಿನೇ ದಿನೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿದೆ. ನಿರುದ್ಯೋಗ ಸಮಸ್ಯೆ ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜನವಿರೋಧಿ ಆಡಳಿತ ನೆಡೆಸುತ್ತಿದೆ. ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ತುರ್ತುಕ್ರಮ ಕೈಗೊಳ್ಳಬೇಕು. ಅದಾನಿ ಪ್ರಕರಣವನ್ನು ಜಂಟಿಸದನ ಸಮಿತಿ ಮೂಲಕ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ l ರೈತರಿಗೆ ಬೆಂಬಲ ಬೆಲೆ: ಸಂಸದರು ಧ್ವನಿ ಎತ್ತದಿದ್ದರೆ ಉಪವಾಸ ಸತ್ಯಾಗ್ರಹ; ರೈತ ಸಂಘ ಎಚ್ಚರಿಕೆ

ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಹೆಚ್ ಜಿ ಉಮೇಶ್, ಜಿಲ್ಲಾ ಮಂಡಳಿ ಸದಸ್ಯ ಪಿ ಷಣ್ಮುಖಸ್ವಾಮಿ, ಐರಣಿ ಚಂದ್ರು, ಎರಗುಂಟಿ ಸುರೇಶ್, ಎಚ್ ಎಸ್ ಚಂದ್ರು, ನಿಟುವಳ್ಳಿ ಬಸವರಾಜ್, ಸಿ ರಮೇಶ್, ಬಿ ಕಲ್ಪನಳ್ಳಿ ವಸಂತ ಕುಮಾರ್, ಕೆರನಹಳ್ಳಿ ರಾಜು, ರಂಗನಾಥ್, ಚಿನ್ನಪ್ಪ, ವಿ ಲಕ್ಷ್ಮಣ, ಸಿದ್ದಲಿಂಗೇಶ್, ರುದ್ರೇಶ್ ಲೋಕಿಕೆರೆ, ತಿಪ್ಪೇಸ್ವಾಮಿ, ಉಮೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X